• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿಯವರಿಂದಲೂ ಗ್ಯಾರಂಟಿ ಪ್ರಸ್ತಾಪ? ಅವರ ಗ್ಯಾರಂಟಿ ಏನು?

Tulunadu News Posted On July 27, 2023


  • Share On Facebook
  • Tweet It

ಮೋದಿಯವರಿಂದಲೂ ಗ್ಯಾರಂಟಿ ಪ್ರಸ್ತಾಪ? ಅವರ ಗ್ಯಾರಂಟಿ ಏನು?
ತಮ್ಮ ಮೂರನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ಬಲಿಷ್ಟ ಆರ್ಥಿಕ ರಾಷ್ಟ್ರವಾಗಿ ಬೆಳೆಯಲಿದೆ. ಇದು ನನ್ನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ. ಕರ್ನಾಟಕದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉಚಿತ ಗ್ಯಾರಂಟಿ ಘೋಷಣೆಗಳಿಂದ ಜನರು ಕಾಂಗ್ರೆಸ್ಸಿಗೆ ಮತ ಹಾಕಿ ಅಭೂತಪೂರ್ವವಾಗಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದರು. ಆದರೆ ಯಾವುದೇ ಒಂದು ಉಚಿತ ಸೌಲಭ್ಯಗಳು ದೇಶದ, ರಾಜ್ಯದ ಅರ್ಥ ವ್ಯವಸ್ಥೆಗೆ ದೊಡ್ಡ ಮಾರಕ ಎಂದು ಈಗಾಗಲೇ ಅರ್ಥಶಾಸ್ತ್ರಜ್ಞರು ತಮ್ಮ ಅಭಿಮತ ಸೂಚಿಸಿದ್ದಾರೆ. ಆದರೆ ಅಧಿಕಾರಕ್ಕೆ ಏರುವ ಹಪಾಹಪಿಯಿಂದ ಕಾಂಗ್ರೆಸ್ ಕರ್ನಾಟಕದಲ್ಲಿ ಇದ್ದಬದ್ದ ಉಚಿತಗಳನ್ನು ನೀಡಿ ಜನರನ್ನು ಸೆಳೆದಿತ್ತು. ಆದರೆ ಮೋದಿಯವರು ವಿಶ್ವದ ಆರ್ಥಿಕ ವ್ಯವಸ್ಥೆಯಲ್ಲಿ ಭಾರತ ಮೂರನೇ ಬಲಾಢ್ಯ ದೇಶವಾಗಿ ಬೆಳೆಯಲಿದೆ ಎಂದು ಹೇಳಿರುವುದು ಜನಸಾಮಾನ್ಯರ ದೃಷ್ಟಿಯಲ್ಲಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇಲ್ಲದಿದ್ದರೂ ಅಖಂಡ ಭಾರತ ಕಲ್ಪನೆಯಲ್ಲಿ ನೋಡುವಾಗ ದೇಶದ ಉನ್ನತಿ ಇದರಿಂದ ಬೇರೆಯದ್ದೇ ಹಂತಕ್ಕೆ ತೆಗೆದುಕೊಂಡು ಹೋಗುತ್ತದೆ ಎನ್ನುವುದು ನಿಶ್ಚಿತ.
ಪ್ರಸ್ತುತ ಭಾರತ ದೇಶ ಅಂದಾಜು 3.5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದಿದ್ದು, 2047 ರಲ್ಲಿ ಭಾರತ ಸ್ವಾತಂತ್ರ್ಯೋತ್ಸವದ ನೂರನೇ ವರ್ಷಾಚರಣೆಯನ್ನು ಆಚರಿಸುವಾಗ 30-35 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದಲಿದೆ ಎಂದು ಅಂದಾಜಿಸಲಾಗಿದೆ.
ಈಗ ಭಾರತ ಹೊಂದುತ್ತಿರುವ ಅಭಿವೃದ್ಧಿಯ ಪ್ರಕಾರ 2027 ರಲ್ಲಿ ಜರ್ಮನಿಯನ್ನು ಹಾಗೂ 2029 ರಲ್ಲಿ ಜಪಾನ್ ದೇಶವನ್ನು ಭಾರತ ಹಿಂದಿಕ್ಕಲಿದೆ. 2014 ರಲ್ಲಿ ಭಾರತ ಈ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿತ್ತು. ಕೊರೊನಾದ ಎರಡು ವರ್ಷಗಳ ಭೀಕರ ಹೊಡೆತದ ಬಳಿಕವೂ ಮೋದಿಯವರ ದೂರದೃಷ್ಟಿ ಹಾಗೂ ಮಹತ್ತರ ಹೆಜ್ಜೆಗಳಿಂದ ಭಾರತ ಈಗಾಗಲೇ 5 ಸ್ಥಾನಕ್ಕೆ ತಲುಪಿದ್ದು, ಮೂರನೇ ಸ್ಥಾನಕ್ಕೆ ಹೋಗಲು ಮೋದಿಯವರು ಈಗಾಗಲೇ ಧೃಡ ಹೆಜ್ಜೆಗಳನ್ನು ಇಟ್ಟಿದ್ದಾರೆ.
ಕಳೆದ ವರ್ಷ ಭಾರತದ ರಫ್ತು 676 ಬಿಲಿಯನ್ ಡಾಲರ್ ದಾಟಿದ್ದು, ಅದು ಮುಂದಿನ ವರ್ಷ 750 ಬಿಲಿಯನ್ ಡಾಲರ್ ತಲುಪಲಿದೆ. ಭಾರತದ ಯುವಶಕ್ತಿ ಮತ್ತು ಉತ್ಸಾಹಿ ಮಾನವಬಲದ ಮೇಲೆ ಭರವಸೆ ಇಟ್ಟಿರುವ ಕೇಂದ್ರ ಸರಕಾರದ ನೀತಿಗಳಿಂದ ಸದ್ಯ ಇದು ಅಸಾಧ್ಯವಲ್ಲ ಎನ್ನುವುದು ಉದ್ಯಮಿಗಳ ಆಶಯ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search