• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯವರಿಂದಲೂ ಗ್ಯಾರಂಟಿ ಪ್ರಸ್ತಾಪ? ಅವರ ಗ್ಯಾರಂಟಿ ಏನು?

Tulunadu News Posted On July 27, 2023
0


0
Shares
  • Share On Facebook
  • Tweet It

ಮೋದಿಯವರಿಂದಲೂ ಗ್ಯಾರಂಟಿ ಪ್ರಸ್ತಾಪ? ಅವರ ಗ್ಯಾರಂಟಿ ಏನು?
ತಮ್ಮ ಮೂರನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ಬಲಿಷ್ಟ ಆರ್ಥಿಕ ರಾಷ್ಟ್ರವಾಗಿ ಬೆಳೆಯಲಿದೆ. ಇದು ನನ್ನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ. ಕರ್ನಾಟಕದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉಚಿತ ಗ್ಯಾರಂಟಿ ಘೋಷಣೆಗಳಿಂದ ಜನರು ಕಾಂಗ್ರೆಸ್ಸಿಗೆ ಮತ ಹಾಕಿ ಅಭೂತಪೂರ್ವವಾಗಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದರು. ಆದರೆ ಯಾವುದೇ ಒಂದು ಉಚಿತ ಸೌಲಭ್ಯಗಳು ದೇಶದ, ರಾಜ್ಯದ ಅರ್ಥ ವ್ಯವಸ್ಥೆಗೆ ದೊಡ್ಡ ಮಾರಕ ಎಂದು ಈಗಾಗಲೇ ಅರ್ಥಶಾಸ್ತ್ರಜ್ಞರು ತಮ್ಮ ಅಭಿಮತ ಸೂಚಿಸಿದ್ದಾರೆ. ಆದರೆ ಅಧಿಕಾರಕ್ಕೆ ಏರುವ ಹಪಾಹಪಿಯಿಂದ ಕಾಂಗ್ರೆಸ್ ಕರ್ನಾಟಕದಲ್ಲಿ ಇದ್ದಬದ್ದ ಉಚಿತಗಳನ್ನು ನೀಡಿ ಜನರನ್ನು ಸೆಳೆದಿತ್ತು. ಆದರೆ ಮೋದಿಯವರು ವಿಶ್ವದ ಆರ್ಥಿಕ ವ್ಯವಸ್ಥೆಯಲ್ಲಿ ಭಾರತ ಮೂರನೇ ಬಲಾಢ್ಯ ದೇಶವಾಗಿ ಬೆಳೆಯಲಿದೆ ಎಂದು ಹೇಳಿರುವುದು ಜನಸಾಮಾನ್ಯರ ದೃಷ್ಟಿಯಲ್ಲಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇಲ್ಲದಿದ್ದರೂ ಅಖಂಡ ಭಾರತ ಕಲ್ಪನೆಯಲ್ಲಿ ನೋಡುವಾಗ ದೇಶದ ಉನ್ನತಿ ಇದರಿಂದ ಬೇರೆಯದ್ದೇ ಹಂತಕ್ಕೆ ತೆಗೆದುಕೊಂಡು ಹೋಗುತ್ತದೆ ಎನ್ನುವುದು ನಿಶ್ಚಿತ.
ಪ್ರಸ್ತುತ ಭಾರತ ದೇಶ ಅಂದಾಜು 3.5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದಿದ್ದು, 2047 ರಲ್ಲಿ ಭಾರತ ಸ್ವಾತಂತ್ರ್ಯೋತ್ಸವದ ನೂರನೇ ವರ್ಷಾಚರಣೆಯನ್ನು ಆಚರಿಸುವಾಗ 30-35 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದಲಿದೆ ಎಂದು ಅಂದಾಜಿಸಲಾಗಿದೆ.
ಈಗ ಭಾರತ ಹೊಂದುತ್ತಿರುವ ಅಭಿವೃದ್ಧಿಯ ಪ್ರಕಾರ 2027 ರಲ್ಲಿ ಜರ್ಮನಿಯನ್ನು ಹಾಗೂ 2029 ರಲ್ಲಿ ಜಪಾನ್ ದೇಶವನ್ನು ಭಾರತ ಹಿಂದಿಕ್ಕಲಿದೆ. 2014 ರಲ್ಲಿ ಭಾರತ ಈ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿತ್ತು. ಕೊರೊನಾದ ಎರಡು ವರ್ಷಗಳ ಭೀಕರ ಹೊಡೆತದ ಬಳಿಕವೂ ಮೋದಿಯವರ ದೂರದೃಷ್ಟಿ ಹಾಗೂ ಮಹತ್ತರ ಹೆಜ್ಜೆಗಳಿಂದ ಭಾರತ ಈಗಾಗಲೇ 5 ಸ್ಥಾನಕ್ಕೆ ತಲುಪಿದ್ದು, ಮೂರನೇ ಸ್ಥಾನಕ್ಕೆ ಹೋಗಲು ಮೋದಿಯವರು ಈಗಾಗಲೇ ಧೃಡ ಹೆಜ್ಜೆಗಳನ್ನು ಇಟ್ಟಿದ್ದಾರೆ.
ಕಳೆದ ವರ್ಷ ಭಾರತದ ರಫ್ತು 676 ಬಿಲಿಯನ್ ಡಾಲರ್ ದಾಟಿದ್ದು, ಅದು ಮುಂದಿನ ವರ್ಷ 750 ಬಿಲಿಯನ್ ಡಾಲರ್ ತಲುಪಲಿದೆ. ಭಾರತದ ಯುವಶಕ್ತಿ ಮತ್ತು ಉತ್ಸಾಹಿ ಮಾನವಬಲದ ಮೇಲೆ ಭರವಸೆ ಇಟ್ಟಿರುವ ಕೇಂದ್ರ ಸರಕಾರದ ನೀತಿಗಳಿಂದ ಸದ್ಯ ಇದು ಅಸಾಧ್ಯವಲ್ಲ ಎನ್ನುವುದು ಉದ್ಯಮಿಗಳ ಆಶಯ

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search