• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಟಿಪಿಒ ಕಟ್ಟಡ ಲೋಕಾರ್ಪಣೆ; ಶೃಂಗೇರಿ ಅರ್ಚಕರಿಂದ ವಿಧಿವಿಧಾನ!

Tulunadu News Posted On July 27, 2023
0


0
Shares
  • Share On Facebook
  • Tweet It

ಭಾರತೀಯ ವ್ಯಾಪಾರ ಅಭಿವೃದ್ಧಿ ಸಂಸ್ಥೆ (ಐಟಿಪಿಒ) ಕಟ್ಟಡವನ್ನು ಪುನಶ್ಚೇತನಗೊಳಿಸಲಾಗಿದ್ದು, ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ವಿಧಿವಿಧಾನಗಳ ಪ್ರಕ್ರಿಯೆ ಪೂರ್ಣಗೊಳಿಸಿ ಉದ್ಘಾಟಿಸಿದರು. ಐಇಸಿಸಿ ( ಎಕ್ಸಿಬ್ಲಿಶನ್ ಮತ್ತು ಕನ್ವéೆನ್ಷನ್ ಸೆಂಟರ್) ಇದಕ್ಕಾಗಿ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಇದು ಪ್ರಗತಿ ಮೈದಾನ ಅಭಿವೃದ್ಧಿ ಯೋಜನೆಯ ಅಂಗವಾಗಿದೆ. 2017 ಜನವರಿಯಂದು ಕೇಂದ್ರ ಸರಕಾರ ಇದರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, 2,254 ಕೋಟಿ ರೂಪಾಯಿ ಇದಕ್ಕೆ ಮೀಸಲಿಡಲಾಗಿತ್ತು.
ನವದೆಹಲಿಯಲ್ಲಿರುವ ನೂತನ ಭವ್ಯ ಕಟ್ಟಡ ಸಂಕೀರ್ಣದಲ್ಲಿ ಏಳು ಸಾವಿರ ಜನರು ಕುಳಿತುಕೊಳ್ಳಲು ಅವಕಾಶ ಇದ್ದು, ಹೊಸ ಆಮ್ಪಿ ಥಿಯೇಟರ್ ನಲ್ಲಿ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮ ನಡೆಯಬಹುದಾಗಿದ್ದು, ಅಲ್ಲಿ 3000 ಜನರು ಆಸೀನರಾಗಬಹುದಾಗಿದೆ. ಇದೇ ನೂತನ ಸುಂದರ ಕಟ್ಟಡದಲ್ಲಿ ಜಿ-20 ಶೃಂಗ ಸಭೆ ನಡೆಯಲಿದೆ. ಈ ಬಾರಿ ಇದರ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಈ ಕಟ್ಟಡ ಭಾರತೀಯರ ಹೆಮ್ಮೆಗೆ ಮತ್ತೊಂದು ಗರಿಯಾಗಿದೆ.
ಯಾವುದೇ ನೂತನ ಸರಕಾರಿ ಕಟ್ಟಡಗಳ ನಿರ್ಮಾಣದ ಮೊದಲು ಶಿಲಾನ್ಯಾಸ ಅಥವಾ ಲೋಕಾರ್ಪಣೆ ಸಂದರ್ಭದಲ್ಲಿ ಮೋದಿಯವರು ಸನಾತನ ವೈದಿಕ ವಿಧಾನಗಳನ್ನು ಅನುಸರಿಸಿ ಮುಂದುವರೆಯುತ್ತಾರೆ. ಬಹಳ ವಿಧಿವಿತ್ತಾಗಿ ಪುರೋಹಿತರ ಮಂತ್ರ ಉಚ್ಚಾರಣೆಯ ನಡುವೆ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿ ನೂತನ ಮಠದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದಿರುವುದು ತಮಗೆ ಸಂತಸ ತಂದಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದು ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ. ಚತುರ್ಧಾಮದ ಸಂಸ್ಥಾಪಕರಾಗಿರುವ ಆದಿ ಶಂಕರಾರ್ಚಾಯರು ಸ್ಥಾಪಿಸಿದ ನಾಲ್ಕು ಧಾಮಗಳಲ್ಲಿ ಶೃಂಗೇರಿಯ ಅಮನ್ಯ ಪೀಠವೂ ಒಂದು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search