• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023
0


0
Shares
  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search