• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023
0


0
Shares
  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search