• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023


  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search