• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023
0


0
Shares
  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search