• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023
0


0
Shares
  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search