• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂತಹ ಕಾಂಗ್ರೆಸ್ ಈಗ “ಇಂಡಿಯಾ” ಭಾಗ!

Tulunadu News Posted On July 29, 2023
0


0
Shares
  • Share On Facebook
  • Tweet It

ಕಾರ್ಗಿಲ್ ವಿಜಯ ಭಾರತದ ಇತಿಹಾಸದಲ್ಲಿ ಅತೀ ದೊಡ್ಡ ವಿಜಯ ಯಾತ್ರೆಗಳಲ್ಲಿ ಪ್ರಮುಖವಾಗಿರುವಂತದ್ದು. ಭಾರತೀಯ ವೀರ ಯೋಧರ ತ್ಯಾಗ, ಬಲಿದಾನದ ಸಂಕೇತವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಕೂಡ ಆಚರಿಸಲಾಗುತ್ತದೆ. ಅಂದು ಭಾರತೀಯರು ಪಕ್ಷಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 2004 ರಲ್ಲಿ ಅಧಿಕಾರಕ್ಕೆ ಬಂದ ಯುಪಿಎ ಮೈತ್ರಿಕೂಟದ ಕೇಂದ್ರ ಸರಕಾರ ಕಾರ್ಗಿಲ್ ಹೀರೋಗಳನ್ನು ಗೌರವಿಸಿರಲಿಲ್ಲ ಎಂದು ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಫಸ್ಟ್ ಪೋಸ್ಟ್ ಮಾಧ್ಯಮದಲ್ಲಿ 2009 ರಲ್ಲಿ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ನೀಡಿರುವ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ರಶೀದ್ ಆಲ್ವಿಯವರ ಪ್ರಕಾರ ಕಾರ್ಗಿಲ್ ವಿಜಯವು ಆಚರಿಸುವಂತಲ್ಲ ವಿಷಯ ಅಲ್ಲ, ಹೆಚ್ಚೆಂದರೆ ಎನ್ ಡಿಎ ಮಾತ್ರ ಅದನ್ನು ಸಂಭ್ರಮಿಸಬಹುದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರೂ ಆಗಿದ್ದ ರಶೀದ್ ಆಲ್ವಿಯವರ ಪ್ರಕಾರ ಅದು ಭಾರತೀಯ ಜನತಾ ಪಾರ್ಟಿಯ ವಿಜಯ. ಇದನ್ನು ಎನ್ ಡಿಎ ಸಂಭ್ರಮಿಸಬೇಕೆ ವಿನ: ನಾವೆಲ್ಲಾ ಯಾಕೆ ಸಂಭ್ರಮಿಸಬೇಕು ಎಂದು ಹೇಳಿದ್ದರು. ಇಂತಹ ಮನಸ್ಥಿತಿಯ ಕಾಂಗ್ರೆಸ್ ಪಕ್ಷ ಈಗ ಐ.ಎನ್.ಡಿ.ಐ.ಎ ಎಂಬ ಮೈತ್ರಿಕೂಟ ರಚಿಸಿಕೊಂಡು ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.
ದೇಶದ ವೀರ ಯೋಧರ ಗೆಲುವನ್ನು ಒಂದು ಪಕ್ಷದ ಗೆಲುವು ಮತ್ತು ಅದನ್ನು ನಾವು ಯಾಕೆ ಆಚರಿಸಬೇಕು ಎನ್ನುವ ಸಂಕುಚಿತ ಮನೋಭಾವನೆಯ ಕಾಂಗ್ರೆಸ್ ಮುಖಂಡರು ಈಗ ಇಂಡಿಯಾ ಎನ್ನುವ ಮೈತ್ರಿಕೂಟ ರಚಿಸಿಕೊಂಡಿದ್ದಾರೆ. ಯೋಧರನ್ನು ಯಾವತ್ತೂ ಒಂದು ಪಕ್ಷ ಅಥವಾ ಅಧಿಕಾರದಲ್ಲಿರುವ ಸರಕಾರದ ಭಾಗ ಎಂದು ಅಂದುಕೊಳ್ಳುವುದೇ ತಪ್ಪು. ಹೀಗೆ ನೋಡುವ ಮೂಲಕ ಕಾಂಗ್ರೆಸ್ ಸೈನಿಕರನ್ನು ಅವಮಾನ ಮಾಡಿದೆ ಎಂದೇ ಹೇಳಬೇಕಾಗುತ್ತದೆ. ಯೋಧರು ಯಾವತ್ತೂ ಒಂದು ಸರಕಾರಕ್ಕಾಗಿ ಕೆಲಸ ಮಾಡುವುದಿಲ್ಲ. ಅವರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಾರೆ. ಈ ಹಿಂದೆ ಕೂಡ ಸೈನಿಕರ ಬಗ್ಗೆ ಕಾಂಗ್ರೆಸ್ ಮತ್ತು ಅಂತಹುದೇ ಮನಸ್ಸಿನವರು ತುಚ್ಚವಾಗಿ ಮಾತನಾಡಿದ್ದನ್ನು ಇತಿಹಾಸ ನೋಡಿದೆ. ಯೋಧರಾಗಲು ಸಿದ್ಧರಿರುವವರು ಯಾವತ್ತೂ ಸಂಬಳ, ಭತ್ಯೆಗಾಗಿ ಸೈನ್ಯವನ್ನು ಸೇರುವುದಿಲ್ಲ. ಅವರು ಭಾರತಾಂಬೆಯ ಸೇವೆಗಾಗಿ ತಮ್ಮನ್ನು ಅರ್ಪಿಸಲು ಮುಂದಾಗಿರುತ್ತಾರೆ. ಇಂತವರ ಬಗ್ಗೆ ಮಾತನಾಡುವ ಮೊದಲು ಕಾಂಗ್ರೆಸ್ ಎಚ್ಚರವಹಿಸಬೇಕು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search