• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂತಹ ಕಾಂಗ್ರೆಸ್ ಈಗ “ಇಂಡಿಯಾ” ಭಾಗ!

Tulunadu News Posted On July 29, 2023
0


0
Shares
  • Share On Facebook
  • Tweet It

ಕಾರ್ಗಿಲ್ ವಿಜಯ ಭಾರತದ ಇತಿಹಾಸದಲ್ಲಿ ಅತೀ ದೊಡ್ಡ ವಿಜಯ ಯಾತ್ರೆಗಳಲ್ಲಿ ಪ್ರಮುಖವಾಗಿರುವಂತದ್ದು. ಭಾರತೀಯ ವೀರ ಯೋಧರ ತ್ಯಾಗ, ಬಲಿದಾನದ ಸಂಕೇತವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಕೂಡ ಆಚರಿಸಲಾಗುತ್ತದೆ. ಅಂದು ಭಾರತೀಯರು ಪಕ್ಷಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 2004 ರಲ್ಲಿ ಅಧಿಕಾರಕ್ಕೆ ಬಂದ ಯುಪಿಎ ಮೈತ್ರಿಕೂಟದ ಕೇಂದ್ರ ಸರಕಾರ ಕಾರ್ಗಿಲ್ ಹೀರೋಗಳನ್ನು ಗೌರವಿಸಿರಲಿಲ್ಲ ಎಂದು ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಫಸ್ಟ್ ಪೋಸ್ಟ್ ಮಾಧ್ಯಮದಲ್ಲಿ 2009 ರಲ್ಲಿ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ನೀಡಿರುವ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ರಶೀದ್ ಆಲ್ವಿಯವರ ಪ್ರಕಾರ ಕಾರ್ಗಿಲ್ ವಿಜಯವು ಆಚರಿಸುವಂತಲ್ಲ ವಿಷಯ ಅಲ್ಲ, ಹೆಚ್ಚೆಂದರೆ ಎನ್ ಡಿಎ ಮಾತ್ರ ಅದನ್ನು ಸಂಭ್ರಮಿಸಬಹುದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರೂ ಆಗಿದ್ದ ರಶೀದ್ ಆಲ್ವಿಯವರ ಪ್ರಕಾರ ಅದು ಭಾರತೀಯ ಜನತಾ ಪಾರ್ಟಿಯ ವಿಜಯ. ಇದನ್ನು ಎನ್ ಡಿಎ ಸಂಭ್ರಮಿಸಬೇಕೆ ವಿನ: ನಾವೆಲ್ಲಾ ಯಾಕೆ ಸಂಭ್ರಮಿಸಬೇಕು ಎಂದು ಹೇಳಿದ್ದರು. ಇಂತಹ ಮನಸ್ಥಿತಿಯ ಕಾಂಗ್ರೆಸ್ ಪಕ್ಷ ಈಗ ಐ.ಎನ್.ಡಿ.ಐ.ಎ ಎಂಬ ಮೈತ್ರಿಕೂಟ ರಚಿಸಿಕೊಂಡು ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.
ದೇಶದ ವೀರ ಯೋಧರ ಗೆಲುವನ್ನು ಒಂದು ಪಕ್ಷದ ಗೆಲುವು ಮತ್ತು ಅದನ್ನು ನಾವು ಯಾಕೆ ಆಚರಿಸಬೇಕು ಎನ್ನುವ ಸಂಕುಚಿತ ಮನೋಭಾವನೆಯ ಕಾಂಗ್ರೆಸ್ ಮುಖಂಡರು ಈಗ ಇಂಡಿಯಾ ಎನ್ನುವ ಮೈತ್ರಿಕೂಟ ರಚಿಸಿಕೊಂಡಿದ್ದಾರೆ. ಯೋಧರನ್ನು ಯಾವತ್ತೂ ಒಂದು ಪಕ್ಷ ಅಥವಾ ಅಧಿಕಾರದಲ್ಲಿರುವ ಸರಕಾರದ ಭಾಗ ಎಂದು ಅಂದುಕೊಳ್ಳುವುದೇ ತಪ್ಪು. ಹೀಗೆ ನೋಡುವ ಮೂಲಕ ಕಾಂಗ್ರೆಸ್ ಸೈನಿಕರನ್ನು ಅವಮಾನ ಮಾಡಿದೆ ಎಂದೇ ಹೇಳಬೇಕಾಗುತ್ತದೆ. ಯೋಧರು ಯಾವತ್ತೂ ಒಂದು ಸರಕಾರಕ್ಕಾಗಿ ಕೆಲಸ ಮಾಡುವುದಿಲ್ಲ. ಅವರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಾರೆ. ಈ ಹಿಂದೆ ಕೂಡ ಸೈನಿಕರ ಬಗ್ಗೆ ಕಾಂಗ್ರೆಸ್ ಮತ್ತು ಅಂತಹುದೇ ಮನಸ್ಸಿನವರು ತುಚ್ಚವಾಗಿ ಮಾತನಾಡಿದ್ದನ್ನು ಇತಿಹಾಸ ನೋಡಿದೆ. ಯೋಧರಾಗಲು ಸಿದ್ಧರಿರುವವರು ಯಾವತ್ತೂ ಸಂಬಳ, ಭತ್ಯೆಗಾಗಿ ಸೈನ್ಯವನ್ನು ಸೇರುವುದಿಲ್ಲ. ಅವರು ಭಾರತಾಂಬೆಯ ಸೇವೆಗಾಗಿ ತಮ್ಮನ್ನು ಅರ್ಪಿಸಲು ಮುಂದಾಗಿರುತ್ತಾರೆ. ಇಂತವರ ಬಗ್ಗೆ ಮಾತನಾಡುವ ಮೊದಲು ಕಾಂಗ್ರೆಸ್ ಎಚ್ಚರವಹಿಸಬೇಕು.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search