• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಂದಿನಿ ತುಪ್ಪದಿಂದ ಇನ್ನು ತಿರುಪತಿ ಲಡ್ಡು ಮಾಡಲಾಗುವುದಿಲ್ಲ!

Tulunadu News Posted On July 31, 2023
0


0
Shares
  • Share On Facebook
  • Tweet It

ತಿರುಪತಿ ಲಡ್ಡುವಿನ ರುಚಿಗೆ ವೆಂಕಟರಮಣನ ಭಕ್ತರಲ್ಲಿ ಮಾರು ಹೋಗದವರು ಯಾರೂ ಇಲ್ಲ. ಒಂದು ಕಡೆ ಪರಮ ಭಕ್ತಿಭಾವದಿಂದ ಕಣ್ಣಿಗೆ ಒತ್ತಿಕೊಂಡು ಲಡ್ಡು ಪ್ರಸಾದವನ್ನು ಬಾಯಿಯಲ್ಲಿ ಹಾಕಿಕೊಂಡರೆ ಲಡ್ಡು ಕೂಡ ಅಷ್ಟೇ ರುಚಿಯಾಗಿ ನಮ್ಮ ದೇಹ, ಮನಸ್ಸನ್ನು ಹರ್ಷ ಉಲ್ಲಾಸಗೊಳಿಸುತ್ತಿತ್ತು. ಅದಕ್ಕೆ ಮುಖ್ಯ ಕಾರಣಗಳಲ್ಲಿ ಒಂದು ಲಡ್ಡು ತಯಾರಿಕೆಯಲ್ಲಿ ಬಳಕೆಯಾಗುತ್ತಿದ್ದ ತುಪ್ಪ. ಆ ತುಪ್ಪ ಬೇರೆ ಎಲ್ಲಿಯದ್ದು, ಅಲ್ಲ, ನಮ್ಮದೇ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ. ಇನ್ನು ಮುಂದೆ ತಿರುಪತಿಯ ಲಡ್ಡುವಿಗೆ ನಂದಿನಿ ತುಪ್ಪ ಬಳಕೆಯಾಗುವುದಿಲ್ಲ.
ಈ ಕುರಿತು ಮಾಹಿತಿ ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಕೆಎಂಎಫ್ ಸಂಸ್ಥೆ ಬಿಡ್ ಮಾಡಿದ ಮೌಲ್ಯವನ್ನು ಟಿಟಿಡಿ ಅಂಗೀಕರಿಸಿಲ್ಲ. ಅದರ ಬದಲು ಕೆಎಂಎಫ್ ಗಿಂತ ಕಡಿಮೆ ಬಿಡ್ ಮಾಡಿದ ಕಂಪೆನಿಗೆ ಗುತ್ತಿಗೆಯನ್ನು ವಹಿಸಿಕೊಡಲಿದೆ. ನಂದಿನಿ ತುಪ್ಪದಿಂದ ಮಾಡುವ ಲಡ್ಡುಗಳು ತುಂಬಾ ರುಚಿಕರವಾಗಿರುತ್ತವೆ ಎನ್ನುವ ಭಕ್ತರ ಅಭಿಪ್ರಾಯಗಳ ಹೊರತಾಗಿಯೂ ಕಡಿಮೆ ದರಕ್ಕೆ ಲಡ್ಡುಗಳನ್ನು ತಯಾರಿಸಬಹುದು ಎನ್ನುವ ಕಾರಣಕ್ಕೆ ಟಿಟಿಡಿ ಈ ನಿರ್ಧಾರ ಕೈಗೊಂಡಿದೆ. ಅಗಸ್ಟ್ 1 ರಿಂದ ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರಗಳು ಹೆಚ್ಚಳವಾಗುತ್ತಿರುವುದರಿಂದ ಟಿಟಿಡಿಗೆ ಪೂರೈಸುತ್ತಿದ್ದ ತುಪ್ಪದ ಬೆಲೆಯನ್ನು ಕೂಡ ಕೆಎಂಎಫ್ ಹೆಚ್ಚಿಸಿತ್ತು. ಕೆಎಂಎಫ್ ತುಪ್ಪ ತನ್ನ ಗುಣಮಟ್ಟದಿಂದ ಅಂತರಾಷ್ಟ್ರೀಯ ಮಾನ್ಯತೆಯನ್ನು ಕೂಡ ಪಡೆದುಕೊಂಡಿದ್ದು, ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಮುಂದೆ ತಿರುಪತಿ ಲಡ್ಡುವಿನಲ್ಲಿ ಕೆಎಂಎಫ್ ತುಪ್ಪ ಬಳಕೆಯಾಗದೇ ಇರುವುದರಿಂದ ಲಡ್ಡುವಿನ ರುಚಿಯಲ್ಲಿ ಏನಾದರೂ ಬದಲಾವಣೆ ಆಗುತ್ತದಾ ಎನ್ನುವುದನ್ನು ಕಾದು ನೋಡಬೇಕು!

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search