• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಂದಿನಿ ತುಪ್ಪದಿಂದ ಇನ್ನು ತಿರುಪತಿ ಲಡ್ಡು ಮಾಡಲಾಗುವುದಿಲ್ಲ!

Tulunadu News Posted On July 31, 2023
0


0
Shares
  • Share On Facebook
  • Tweet It

ತಿರುಪತಿ ಲಡ್ಡುವಿನ ರುಚಿಗೆ ವೆಂಕಟರಮಣನ ಭಕ್ತರಲ್ಲಿ ಮಾರು ಹೋಗದವರು ಯಾರೂ ಇಲ್ಲ. ಒಂದು ಕಡೆ ಪರಮ ಭಕ್ತಿಭಾವದಿಂದ ಕಣ್ಣಿಗೆ ಒತ್ತಿಕೊಂಡು ಲಡ್ಡು ಪ್ರಸಾದವನ್ನು ಬಾಯಿಯಲ್ಲಿ ಹಾಕಿಕೊಂಡರೆ ಲಡ್ಡು ಕೂಡ ಅಷ್ಟೇ ರುಚಿಯಾಗಿ ನಮ್ಮ ದೇಹ, ಮನಸ್ಸನ್ನು ಹರ್ಷ ಉಲ್ಲಾಸಗೊಳಿಸುತ್ತಿತ್ತು. ಅದಕ್ಕೆ ಮುಖ್ಯ ಕಾರಣಗಳಲ್ಲಿ ಒಂದು ಲಡ್ಡು ತಯಾರಿಕೆಯಲ್ಲಿ ಬಳಕೆಯಾಗುತ್ತಿದ್ದ ತುಪ್ಪ. ಆ ತುಪ್ಪ ಬೇರೆ ಎಲ್ಲಿಯದ್ದು, ಅಲ್ಲ, ನಮ್ಮದೇ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ. ಇನ್ನು ಮುಂದೆ ತಿರುಪತಿಯ ಲಡ್ಡುವಿಗೆ ನಂದಿನಿ ತುಪ್ಪ ಬಳಕೆಯಾಗುವುದಿಲ್ಲ.
ಈ ಕುರಿತು ಮಾಹಿತಿ ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಕೆಎಂಎಫ್ ಸಂಸ್ಥೆ ಬಿಡ್ ಮಾಡಿದ ಮೌಲ್ಯವನ್ನು ಟಿಟಿಡಿ ಅಂಗೀಕರಿಸಿಲ್ಲ. ಅದರ ಬದಲು ಕೆಎಂಎಫ್ ಗಿಂತ ಕಡಿಮೆ ಬಿಡ್ ಮಾಡಿದ ಕಂಪೆನಿಗೆ ಗುತ್ತಿಗೆಯನ್ನು ವಹಿಸಿಕೊಡಲಿದೆ. ನಂದಿನಿ ತುಪ್ಪದಿಂದ ಮಾಡುವ ಲಡ್ಡುಗಳು ತುಂಬಾ ರುಚಿಕರವಾಗಿರುತ್ತವೆ ಎನ್ನುವ ಭಕ್ತರ ಅಭಿಪ್ರಾಯಗಳ ಹೊರತಾಗಿಯೂ ಕಡಿಮೆ ದರಕ್ಕೆ ಲಡ್ಡುಗಳನ್ನು ತಯಾರಿಸಬಹುದು ಎನ್ನುವ ಕಾರಣಕ್ಕೆ ಟಿಟಿಡಿ ಈ ನಿರ್ಧಾರ ಕೈಗೊಂಡಿದೆ. ಅಗಸ್ಟ್ 1 ರಿಂದ ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರಗಳು ಹೆಚ್ಚಳವಾಗುತ್ತಿರುವುದರಿಂದ ಟಿಟಿಡಿಗೆ ಪೂರೈಸುತ್ತಿದ್ದ ತುಪ್ಪದ ಬೆಲೆಯನ್ನು ಕೂಡ ಕೆಎಂಎಫ್ ಹೆಚ್ಚಿಸಿತ್ತು. ಕೆಎಂಎಫ್ ತುಪ್ಪ ತನ್ನ ಗುಣಮಟ್ಟದಿಂದ ಅಂತರಾಷ್ಟ್ರೀಯ ಮಾನ್ಯತೆಯನ್ನು ಕೂಡ ಪಡೆದುಕೊಂಡಿದ್ದು, ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಮುಂದೆ ತಿರುಪತಿ ಲಡ್ಡುವಿನಲ್ಲಿ ಕೆಎಂಎಫ್ ತುಪ್ಪ ಬಳಕೆಯಾಗದೇ ಇರುವುದರಿಂದ ಲಡ್ಡುವಿನ ರುಚಿಯಲ್ಲಿ ಏನಾದರೂ ಬದಲಾವಣೆ ಆಗುತ್ತದಾ ಎನ್ನುವುದನ್ನು ಕಾದು ನೋಡಬೇಕು!

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search