• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಂದಿನಿ ತುಪ್ಪದಿಂದ ಇನ್ನು ತಿರುಪತಿ ಲಡ್ಡು ಮಾಡಲಾಗುವುದಿಲ್ಲ!

Tulunadu News Posted On July 31, 2023
0


0
Shares
  • Share On Facebook
  • Tweet It

ತಿರುಪತಿ ಲಡ್ಡುವಿನ ರುಚಿಗೆ ವೆಂಕಟರಮಣನ ಭಕ್ತರಲ್ಲಿ ಮಾರು ಹೋಗದವರು ಯಾರೂ ಇಲ್ಲ. ಒಂದು ಕಡೆ ಪರಮ ಭಕ್ತಿಭಾವದಿಂದ ಕಣ್ಣಿಗೆ ಒತ್ತಿಕೊಂಡು ಲಡ್ಡು ಪ್ರಸಾದವನ್ನು ಬಾಯಿಯಲ್ಲಿ ಹಾಕಿಕೊಂಡರೆ ಲಡ್ಡು ಕೂಡ ಅಷ್ಟೇ ರುಚಿಯಾಗಿ ನಮ್ಮ ದೇಹ, ಮನಸ್ಸನ್ನು ಹರ್ಷ ಉಲ್ಲಾಸಗೊಳಿಸುತ್ತಿತ್ತು. ಅದಕ್ಕೆ ಮುಖ್ಯ ಕಾರಣಗಳಲ್ಲಿ ಒಂದು ಲಡ್ಡು ತಯಾರಿಕೆಯಲ್ಲಿ ಬಳಕೆಯಾಗುತ್ತಿದ್ದ ತುಪ್ಪ. ಆ ತುಪ್ಪ ಬೇರೆ ಎಲ್ಲಿಯದ್ದು, ಅಲ್ಲ, ನಮ್ಮದೇ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ. ಇನ್ನು ಮುಂದೆ ತಿರುಪತಿಯ ಲಡ್ಡುವಿಗೆ ನಂದಿನಿ ತುಪ್ಪ ಬಳಕೆಯಾಗುವುದಿಲ್ಲ.
ಈ ಕುರಿತು ಮಾಹಿತಿ ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಕೆಎಂಎಫ್ ಸಂಸ್ಥೆ ಬಿಡ್ ಮಾಡಿದ ಮೌಲ್ಯವನ್ನು ಟಿಟಿಡಿ ಅಂಗೀಕರಿಸಿಲ್ಲ. ಅದರ ಬದಲು ಕೆಎಂಎಫ್ ಗಿಂತ ಕಡಿಮೆ ಬಿಡ್ ಮಾಡಿದ ಕಂಪೆನಿಗೆ ಗುತ್ತಿಗೆಯನ್ನು ವಹಿಸಿಕೊಡಲಿದೆ. ನಂದಿನಿ ತುಪ್ಪದಿಂದ ಮಾಡುವ ಲಡ್ಡುಗಳು ತುಂಬಾ ರುಚಿಕರವಾಗಿರುತ್ತವೆ ಎನ್ನುವ ಭಕ್ತರ ಅಭಿಪ್ರಾಯಗಳ ಹೊರತಾಗಿಯೂ ಕಡಿಮೆ ದರಕ್ಕೆ ಲಡ್ಡುಗಳನ್ನು ತಯಾರಿಸಬಹುದು ಎನ್ನುವ ಕಾರಣಕ್ಕೆ ಟಿಟಿಡಿ ಈ ನಿರ್ಧಾರ ಕೈಗೊಂಡಿದೆ. ಅಗಸ್ಟ್ 1 ರಿಂದ ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರಗಳು ಹೆಚ್ಚಳವಾಗುತ್ತಿರುವುದರಿಂದ ಟಿಟಿಡಿಗೆ ಪೂರೈಸುತ್ತಿದ್ದ ತುಪ್ಪದ ಬೆಲೆಯನ್ನು ಕೂಡ ಕೆಎಂಎಫ್ ಹೆಚ್ಚಿಸಿತ್ತು. ಕೆಎಂಎಫ್ ತುಪ್ಪ ತನ್ನ ಗುಣಮಟ್ಟದಿಂದ ಅಂತರಾಷ್ಟ್ರೀಯ ಮಾನ್ಯತೆಯನ್ನು ಕೂಡ ಪಡೆದುಕೊಂಡಿದ್ದು, ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಮುಂದೆ ತಿರುಪತಿ ಲಡ್ಡುವಿನಲ್ಲಿ ಕೆಎಂಎಫ್ ತುಪ್ಪ ಬಳಕೆಯಾಗದೇ ಇರುವುದರಿಂದ ಲಡ್ಡುವಿನ ರುಚಿಯಲ್ಲಿ ಏನಾದರೂ ಬದಲಾವಣೆ ಆಗುತ್ತದಾ ಎನ್ನುವುದನ್ನು ಕಾದು ನೋಡಬೇಕು!

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search