• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಂದಿನಿ ತುಪ್ಪದಿಂದ ಇನ್ನು ತಿರುಪತಿ ಲಡ್ಡು ಮಾಡಲಾಗುವುದಿಲ್ಲ!

Tulunadu News Posted On July 31, 2023


  • Share On Facebook
  • Tweet It

ತಿರುಪತಿ ಲಡ್ಡುವಿನ ರುಚಿಗೆ ವೆಂಕಟರಮಣನ ಭಕ್ತರಲ್ಲಿ ಮಾರು ಹೋಗದವರು ಯಾರೂ ಇಲ್ಲ. ಒಂದು ಕಡೆ ಪರಮ ಭಕ್ತಿಭಾವದಿಂದ ಕಣ್ಣಿಗೆ ಒತ್ತಿಕೊಂಡು ಲಡ್ಡು ಪ್ರಸಾದವನ್ನು ಬಾಯಿಯಲ್ಲಿ ಹಾಕಿಕೊಂಡರೆ ಲಡ್ಡು ಕೂಡ ಅಷ್ಟೇ ರುಚಿಯಾಗಿ ನಮ್ಮ ದೇಹ, ಮನಸ್ಸನ್ನು ಹರ್ಷ ಉಲ್ಲಾಸಗೊಳಿಸುತ್ತಿತ್ತು. ಅದಕ್ಕೆ ಮುಖ್ಯ ಕಾರಣಗಳಲ್ಲಿ ಒಂದು ಲಡ್ಡು ತಯಾರಿಕೆಯಲ್ಲಿ ಬಳಕೆಯಾಗುತ್ತಿದ್ದ ತುಪ್ಪ. ಆ ತುಪ್ಪ ಬೇರೆ ಎಲ್ಲಿಯದ್ದು, ಅಲ್ಲ, ನಮ್ಮದೇ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ. ಇನ್ನು ಮುಂದೆ ತಿರುಪತಿಯ ಲಡ್ಡುವಿಗೆ ನಂದಿನಿ ತುಪ್ಪ ಬಳಕೆಯಾಗುವುದಿಲ್ಲ.
ಈ ಕುರಿತು ಮಾಹಿತಿ ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಕೆಎಂಎಫ್ ಸಂಸ್ಥೆ ಬಿಡ್ ಮಾಡಿದ ಮೌಲ್ಯವನ್ನು ಟಿಟಿಡಿ ಅಂಗೀಕರಿಸಿಲ್ಲ. ಅದರ ಬದಲು ಕೆಎಂಎಫ್ ಗಿಂತ ಕಡಿಮೆ ಬಿಡ್ ಮಾಡಿದ ಕಂಪೆನಿಗೆ ಗುತ್ತಿಗೆಯನ್ನು ವಹಿಸಿಕೊಡಲಿದೆ. ನಂದಿನಿ ತುಪ್ಪದಿಂದ ಮಾಡುವ ಲಡ್ಡುಗಳು ತುಂಬಾ ರುಚಿಕರವಾಗಿರುತ್ತವೆ ಎನ್ನುವ ಭಕ್ತರ ಅಭಿಪ್ರಾಯಗಳ ಹೊರತಾಗಿಯೂ ಕಡಿಮೆ ದರಕ್ಕೆ ಲಡ್ಡುಗಳನ್ನು ತಯಾರಿಸಬಹುದು ಎನ್ನುವ ಕಾರಣಕ್ಕೆ ಟಿಟಿಡಿ ಈ ನಿರ್ಧಾರ ಕೈಗೊಂಡಿದೆ. ಅಗಸ್ಟ್ 1 ರಿಂದ ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರಗಳು ಹೆಚ್ಚಳವಾಗುತ್ತಿರುವುದರಿಂದ ಟಿಟಿಡಿಗೆ ಪೂರೈಸುತ್ತಿದ್ದ ತುಪ್ಪದ ಬೆಲೆಯನ್ನು ಕೂಡ ಕೆಎಂಎಫ್ ಹೆಚ್ಚಿಸಿತ್ತು. ಕೆಎಂಎಫ್ ತುಪ್ಪ ತನ್ನ ಗುಣಮಟ್ಟದಿಂದ ಅಂತರಾಷ್ಟ್ರೀಯ ಮಾನ್ಯತೆಯನ್ನು ಕೂಡ ಪಡೆದುಕೊಂಡಿದ್ದು, ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಮುಂದೆ ತಿರುಪತಿ ಲಡ್ಡುವಿನಲ್ಲಿ ಕೆಎಂಎಫ್ ತುಪ್ಪ ಬಳಕೆಯಾಗದೇ ಇರುವುದರಿಂದ ಲಡ್ಡುವಿನ ರುಚಿಯಲ್ಲಿ ಏನಾದರೂ ಬದಲಾವಣೆ ಆಗುತ್ತದಾ ಎನ್ನುವುದನ್ನು ಕಾದು ನೋಡಬೇಕು!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search