• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜ ಕಲ್ಯಾಣ ಸಚಿವರಿಂದಲೇ ಮಾಹಿತಿ

Tulunadu News Posted On August 1, 2023
0


0
Shares
  • Share On Facebook
  • Tweet It

ರಾಜ್ಯ ಸರಕಾರ ತನ್ನ ಗ್ಯಾರಂಟಿಗಳಿಗೆ ಬೇಕಾಗುವ ಸಾವಿರಾರು ಕೋಟಿ ರೂಪಾಯಿ ಹಣವನ್ನು ಎಲ್ಲಿಂದ ಹೊಂದಿಸುತ್ತದೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿತ್ತು. ಕೊನೆಗೂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಎಲ್ಲೆಲ್ಲಿ ಸಾಧ್ಯವಿದೆಯೋ ಎಲ್ಲಾ ಇಲಾಖೆಗಳ ನಿಧಿಗೆ ಕೈ ಹಾಕುವ ಕೆಲಸಕ್ಕೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನ (ಎಸ್ ಸಿಎಸ್ ಪಿ-ಟಿಎಸ್ ಪಿ) ವನ್ನು ರಾಜ್ಯ ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಬಳಸಲು ಮುಂದಾಗಿದೆ. ಇದನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ತಿಳಿಸಿದ್ದಾರೆ. ಸುಮಾರು 11 ಸಾವಿರ ಕೋಟಿ ರೂಪಾಯಿಯನ್ನು ಈ ಗ್ಯಾರಂಟಿಗಳ ಜಾರಿಗಾಗಿ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.
ಎಸ್ ಸಿಎಸ್ ಪಿಯಿಂದ 7,570 ಕೋಟಿ ಮತ್ತು ಟಿಎಸ್ ಪಿಯಿಂದ 3,430 ಕೋಟಿಯನ್ನು ಬಳಕೆ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗಾಗಿ ಮಾತ್ರವೇ ಈ ಹಣವನ್ನು ಬಳಸಲಾಗುವುದು. ಬೇರೆಯವರಿಗೆ ಬಳಸುವ ಪ್ರಶ್ನೆ ಇಲ್ಲ ಎಂದು ಸಮಜಾಯಿಷಿ ನೀಡಲು ಸಚಿವರು ಪ್ರಯತ್ನಪಟ್ಟರು. ಎಲ್ಲಾ ಉಚಿತ ಗ್ಯಾರಂಟಿ ಯೋಜನೆಗಳಿಗೆ ಒಟ್ಟು ಎಷ್ಟು ಹಣ ಬೇಕಾಗಬಹುದು ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಕೆಲವು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಬೇಕಾಗಬಹುದು. ಕೆಲವು ಗ್ಯಾರಂಟಿ ಯೋಜನೆಗಳಿಗೆ ಕಡಿಮೆ ಹಣ ಬೇಕಾಗಬಹುದು. ಶಕ್ತಿ ಗ್ಯಾರಂಟಿಯಲ್ಲಿ ಓರ್ವ ಮಹಿಳೆ ತಿಂಗಳಿಗೆ ಒಂದು ಸಲ ಪ್ರಯಾಣ ಮಾಡಬಹುದು. ಅದೇ ಇನ್ನೊಬ್ಬ ಮಹಿಳೆ ತಿಂಗಳಿಗೆ 30 ಸಲ ಪ್ರಯಾಣ ಮಾಡಬಹುದು. ಆದ್ದರಿಂದ ಸರಕಾರ ವಿನಿಯೋಗಿಸುವ ಅನುದಾನದಲ್ಲಿ ಹೆಚ್ಚು ಕಡಿಮೆ ಆಗಬಹುದು.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search