• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜ ಕಲ್ಯಾಣ ಸಚಿವರಿಂದಲೇ ಮಾಹಿತಿ

Tulunadu News Posted On August 1, 2023
0


0
Shares
  • Share On Facebook
  • Tweet It

ರಾಜ್ಯ ಸರಕಾರ ತನ್ನ ಗ್ಯಾರಂಟಿಗಳಿಗೆ ಬೇಕಾಗುವ ಸಾವಿರಾರು ಕೋಟಿ ರೂಪಾಯಿ ಹಣವನ್ನು ಎಲ್ಲಿಂದ ಹೊಂದಿಸುತ್ತದೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿತ್ತು. ಕೊನೆಗೂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಎಲ್ಲೆಲ್ಲಿ ಸಾಧ್ಯವಿದೆಯೋ ಎಲ್ಲಾ ಇಲಾಖೆಗಳ ನಿಧಿಗೆ ಕೈ ಹಾಕುವ ಕೆಲಸಕ್ಕೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನ (ಎಸ್ ಸಿಎಸ್ ಪಿ-ಟಿಎಸ್ ಪಿ) ವನ್ನು ರಾಜ್ಯ ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಬಳಸಲು ಮುಂದಾಗಿದೆ. ಇದನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ತಿಳಿಸಿದ್ದಾರೆ. ಸುಮಾರು 11 ಸಾವಿರ ಕೋಟಿ ರೂಪಾಯಿಯನ್ನು ಈ ಗ್ಯಾರಂಟಿಗಳ ಜಾರಿಗಾಗಿ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.
ಎಸ್ ಸಿಎಸ್ ಪಿಯಿಂದ 7,570 ಕೋಟಿ ಮತ್ತು ಟಿಎಸ್ ಪಿಯಿಂದ 3,430 ಕೋಟಿಯನ್ನು ಬಳಕೆ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗಾಗಿ ಮಾತ್ರವೇ ಈ ಹಣವನ್ನು ಬಳಸಲಾಗುವುದು. ಬೇರೆಯವರಿಗೆ ಬಳಸುವ ಪ್ರಶ್ನೆ ಇಲ್ಲ ಎಂದು ಸಮಜಾಯಿಷಿ ನೀಡಲು ಸಚಿವರು ಪ್ರಯತ್ನಪಟ್ಟರು. ಎಲ್ಲಾ ಉಚಿತ ಗ್ಯಾರಂಟಿ ಯೋಜನೆಗಳಿಗೆ ಒಟ್ಟು ಎಷ್ಟು ಹಣ ಬೇಕಾಗಬಹುದು ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಕೆಲವು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಬೇಕಾಗಬಹುದು. ಕೆಲವು ಗ್ಯಾರಂಟಿ ಯೋಜನೆಗಳಿಗೆ ಕಡಿಮೆ ಹಣ ಬೇಕಾಗಬಹುದು. ಶಕ್ತಿ ಗ್ಯಾರಂಟಿಯಲ್ಲಿ ಓರ್ವ ಮಹಿಳೆ ತಿಂಗಳಿಗೆ ಒಂದು ಸಲ ಪ್ರಯಾಣ ಮಾಡಬಹುದು. ಅದೇ ಇನ್ನೊಬ್ಬ ಮಹಿಳೆ ತಿಂಗಳಿಗೆ 30 ಸಲ ಪ್ರಯಾಣ ಮಾಡಬಹುದು. ಆದ್ದರಿಂದ ಸರಕಾರ ವಿನಿಯೋಗಿಸುವ ಅನುದಾನದಲ್ಲಿ ಹೆಚ್ಚು ಕಡಿಮೆ ಆಗಬಹುದು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search