• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜ ಕಲ್ಯಾಣ ಸಚಿವರಿಂದಲೇ ಮಾಹಿತಿ

Tulunadu News Posted On August 1, 2023
0


0
Shares
  • Share On Facebook
  • Tweet It

ರಾಜ್ಯ ಸರಕಾರ ತನ್ನ ಗ್ಯಾರಂಟಿಗಳಿಗೆ ಬೇಕಾಗುವ ಸಾವಿರಾರು ಕೋಟಿ ರೂಪಾಯಿ ಹಣವನ್ನು ಎಲ್ಲಿಂದ ಹೊಂದಿಸುತ್ತದೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿತ್ತು. ಕೊನೆಗೂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಎಲ್ಲೆಲ್ಲಿ ಸಾಧ್ಯವಿದೆಯೋ ಎಲ್ಲಾ ಇಲಾಖೆಗಳ ನಿಧಿಗೆ ಕೈ ಹಾಕುವ ಕೆಲಸಕ್ಕೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನ (ಎಸ್ ಸಿಎಸ್ ಪಿ-ಟಿಎಸ್ ಪಿ) ವನ್ನು ರಾಜ್ಯ ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಬಳಸಲು ಮುಂದಾಗಿದೆ. ಇದನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ತಿಳಿಸಿದ್ದಾರೆ. ಸುಮಾರು 11 ಸಾವಿರ ಕೋಟಿ ರೂಪಾಯಿಯನ್ನು ಈ ಗ್ಯಾರಂಟಿಗಳ ಜಾರಿಗಾಗಿ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.
ಎಸ್ ಸಿಎಸ್ ಪಿಯಿಂದ 7,570 ಕೋಟಿ ಮತ್ತು ಟಿಎಸ್ ಪಿಯಿಂದ 3,430 ಕೋಟಿಯನ್ನು ಬಳಕೆ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗಾಗಿ ಮಾತ್ರವೇ ಈ ಹಣವನ್ನು ಬಳಸಲಾಗುವುದು. ಬೇರೆಯವರಿಗೆ ಬಳಸುವ ಪ್ರಶ್ನೆ ಇಲ್ಲ ಎಂದು ಸಮಜಾಯಿಷಿ ನೀಡಲು ಸಚಿವರು ಪ್ರಯತ್ನಪಟ್ಟರು. ಎಲ್ಲಾ ಉಚಿತ ಗ್ಯಾರಂಟಿ ಯೋಜನೆಗಳಿಗೆ ಒಟ್ಟು ಎಷ್ಟು ಹಣ ಬೇಕಾಗಬಹುದು ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಕೆಲವು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಬೇಕಾಗಬಹುದು. ಕೆಲವು ಗ್ಯಾರಂಟಿ ಯೋಜನೆಗಳಿಗೆ ಕಡಿಮೆ ಹಣ ಬೇಕಾಗಬಹುದು. ಶಕ್ತಿ ಗ್ಯಾರಂಟಿಯಲ್ಲಿ ಓರ್ವ ಮಹಿಳೆ ತಿಂಗಳಿಗೆ ಒಂದು ಸಲ ಪ್ರಯಾಣ ಮಾಡಬಹುದು. ಅದೇ ಇನ್ನೊಬ್ಬ ಮಹಿಳೆ ತಿಂಗಳಿಗೆ 30 ಸಲ ಪ್ರಯಾಣ ಮಾಡಬಹುದು. ಆದ್ದರಿಂದ ಸರಕಾರ ವಿನಿಯೋಗಿಸುವ ಅನುದಾನದಲ್ಲಿ ಹೆಚ್ಚು ಕಡಿಮೆ ಆಗಬಹುದು.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search