• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ 5 ರೂ ಕಾಯಿನಿಂದ ಬಾಂಗ್ಲಾದಲ್ಲಿ 6 ಬ್ಲೇಡ್ ತಯಾರಿ!

Tulunadu News Posted On August 2, 2023


  • Share On Facebook
  • Tweet It

ನಿಮ್ಮಲ್ಲಿ ಐದು ರೂಪಾಯಿ ನಾಣ್ಯ ಇದೆಯಾ? ಅದು ತುಂಬಾ ದಪ್ಪ ಇದೆಯಾ? ಹಾಗಾದರೆ ಅದು ಕೆಲವೇ ದಿನಗಳಲ್ಲಿ ಮಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ನೀವು ಅಂತಹ ದಪ್ಪ ಆಕಾರದ ಐದು ರೂಪಾಯಿ ನಾಣ್ಯಗಳನ್ನು ಬಹಳ ಅಪರೂಪವಾಗಿ ನೋಡಿರಬಹುದು. ಆದರ ಅರ್ಥ ಭಾರತ ಸರಕಾರ ಎರಡು ಸಾವಿರ ರೂಪಾಯಿಯಂತೆ ಅದನ್ನು ಕೂಡ ಹಿಂದಕ್ಕೆ ಪಡೆದುಕೊಂಡಿರಬಹುದಾ ಎಂದು ನಿಮಗೆ ಅನಿಸಬಹುದು. ಇಲ್ಲಿ ಇರುವ ವಿಷಯ ಏನಪ್ಪ ಎಂದರೆ ಭಾರತದ ದಪ್ಪ ಐದು ರೂಪಾಯಿ ನಾಣ್ಯಗಳನ್ನು ಇಲ್ಲಿಂದ ಬಾಂಗ್ಲಾ ದೇಶಕ್ಕೆ ಸ್ಮಂಗಲ್ ಮಾಡಲಾಗುತ್ತಿತ್ತು. ಅದಕ್ಕೆ ಕಾರಣ ಬ್ಲೇಡ್ ಗಳ ತಯಾರಿಕೆ. ಬ್ಲೇಡ್ ಗಳಿಗೆ ಬಳಕೆಯಾಗುವ ಕಾರ್ಬನ್ ಸ್ಟೀಲ್ ಕಚ್ಚಾ ವಸ್ತುಗಳು ಬಾಂಗ್ಲಾ ದೇಶದಲ್ಲಿ ಬಹಳ ದುಬಾರಿಯಾಗಿದೆ. ಅದಕ್ಕಾಗಿ ಬಾಂಗ್ಲಾದ ಬ್ಲೇಡ್ ತಯಾರಕರು ನಮ್ಮ ದೇಶದ ಐದು ರೂಪಾಯಿ ಕಾಯಿನ್ ಗಳನ್ನು ತಮ್ಮ ದೇಶಕ್ಕೆ ಕಳ್ಳ ಸಾಗಾಣಿಕೆ ಮೂಲಕ ತರಿಸಿಕೊಳ್ಳುತ್ತಿದ್ದರು. ಒಂದೊಂದು ಕಾಯಿನ್ ನಿಂದ ತಲಾ ಆರು ಬ್ಲೇಡ್ ಗಳನ್ನು ಉತ್ಪಾದಿಸಿ ತಲಾ ಬ್ಲೇಡ್ ಗಳನ್ನು 2 ರೂಪಾಯಿಗಳಿಗೆ ಮಾರಲಾಗುತ್ತಿತ್ತು. ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿ ಈ ಕಳ್ಳ ಸ್ಮಂಗ್ಲಿಂಗ್ ಜೋರಾಗಿ ನಡೆಯುತ್ತಿತ್ತು. ಇದು ಭಾರತ ಸರಕಾರಕ್ಕೆ ತಿಳಿದ ಕೂಡಲೇ ನಮ್ಮ ದೇಶದಲ್ಲಿ ಹೊಸ ಐದು ರೂಪಾಯಿ ನಾಣ್ಯಗಳನ್ನು ತಯಾರಿಸುವ ಪ್ರಕ್ರಿಯೆ ಶುರುವಾಯಿತು. ಹೊಸ ಐದು ರೂಪಾಯಿ ನಾಣ್ಯವನ್ನು ಹೇಗೆ ತಯಾರಿಸಲಾಗಿದೆ ಎಂದರೆ ಅದನ್ನು ಯಾವುದೇ ಕಾರಣಕ್ಕೂ ಕರಗಿಸಿ ಬೇರೆ ವಸ್ತುಗಳನ್ನು ತಯಾರಿಸಲು ಆಗುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಈ ಹೊಸ ಐದು ರೂಪಾಯಿ ನಾಣ್ಯವನ್ನು ಹೆಚ್ಚಾಗಿ ಬಳಸುವಂತೆ ಜನರಿಗೆ ಕರೆ ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search