• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ 5 ರೂ ಕಾಯಿನಿಂದ ಬಾಂಗ್ಲಾದಲ್ಲಿ 6 ಬ್ಲೇಡ್ ತಯಾರಿ!

Tulunadu News Posted On August 2, 2023
0


0
Shares
  • Share On Facebook
  • Tweet It

ನಿಮ್ಮಲ್ಲಿ ಐದು ರೂಪಾಯಿ ನಾಣ್ಯ ಇದೆಯಾ? ಅದು ತುಂಬಾ ದಪ್ಪ ಇದೆಯಾ? ಹಾಗಾದರೆ ಅದು ಕೆಲವೇ ದಿನಗಳಲ್ಲಿ ಮಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ನೀವು ಅಂತಹ ದಪ್ಪ ಆಕಾರದ ಐದು ರೂಪಾಯಿ ನಾಣ್ಯಗಳನ್ನು ಬಹಳ ಅಪರೂಪವಾಗಿ ನೋಡಿರಬಹುದು. ಆದರ ಅರ್ಥ ಭಾರತ ಸರಕಾರ ಎರಡು ಸಾವಿರ ರೂಪಾಯಿಯಂತೆ ಅದನ್ನು ಕೂಡ ಹಿಂದಕ್ಕೆ ಪಡೆದುಕೊಂಡಿರಬಹುದಾ ಎಂದು ನಿಮಗೆ ಅನಿಸಬಹುದು. ಇಲ್ಲಿ ಇರುವ ವಿಷಯ ಏನಪ್ಪ ಎಂದರೆ ಭಾರತದ ದಪ್ಪ ಐದು ರೂಪಾಯಿ ನಾಣ್ಯಗಳನ್ನು ಇಲ್ಲಿಂದ ಬಾಂಗ್ಲಾ ದೇಶಕ್ಕೆ ಸ್ಮಂಗಲ್ ಮಾಡಲಾಗುತ್ತಿತ್ತು. ಅದಕ್ಕೆ ಕಾರಣ ಬ್ಲೇಡ್ ಗಳ ತಯಾರಿಕೆ. ಬ್ಲೇಡ್ ಗಳಿಗೆ ಬಳಕೆಯಾಗುವ ಕಾರ್ಬನ್ ಸ್ಟೀಲ್ ಕಚ್ಚಾ ವಸ್ತುಗಳು ಬಾಂಗ್ಲಾ ದೇಶದಲ್ಲಿ ಬಹಳ ದುಬಾರಿಯಾಗಿದೆ. ಅದಕ್ಕಾಗಿ ಬಾಂಗ್ಲಾದ ಬ್ಲೇಡ್ ತಯಾರಕರು ನಮ್ಮ ದೇಶದ ಐದು ರೂಪಾಯಿ ಕಾಯಿನ್ ಗಳನ್ನು ತಮ್ಮ ದೇಶಕ್ಕೆ ಕಳ್ಳ ಸಾಗಾಣಿಕೆ ಮೂಲಕ ತರಿಸಿಕೊಳ್ಳುತ್ತಿದ್ದರು. ಒಂದೊಂದು ಕಾಯಿನ್ ನಿಂದ ತಲಾ ಆರು ಬ್ಲೇಡ್ ಗಳನ್ನು ಉತ್ಪಾದಿಸಿ ತಲಾ ಬ್ಲೇಡ್ ಗಳನ್ನು 2 ರೂಪಾಯಿಗಳಿಗೆ ಮಾರಲಾಗುತ್ತಿತ್ತು. ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿ ಈ ಕಳ್ಳ ಸ್ಮಂಗ್ಲಿಂಗ್ ಜೋರಾಗಿ ನಡೆಯುತ್ತಿತ್ತು. ಇದು ಭಾರತ ಸರಕಾರಕ್ಕೆ ತಿಳಿದ ಕೂಡಲೇ ನಮ್ಮ ದೇಶದಲ್ಲಿ ಹೊಸ ಐದು ರೂಪಾಯಿ ನಾಣ್ಯಗಳನ್ನು ತಯಾರಿಸುವ ಪ್ರಕ್ರಿಯೆ ಶುರುವಾಯಿತು. ಹೊಸ ಐದು ರೂಪಾಯಿ ನಾಣ್ಯವನ್ನು ಹೇಗೆ ತಯಾರಿಸಲಾಗಿದೆ ಎಂದರೆ ಅದನ್ನು ಯಾವುದೇ ಕಾರಣಕ್ಕೂ ಕರಗಿಸಿ ಬೇರೆ ವಸ್ತುಗಳನ್ನು ತಯಾರಿಸಲು ಆಗುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಈ ಹೊಸ ಐದು ರೂಪಾಯಿ ನಾಣ್ಯವನ್ನು ಹೆಚ್ಚಾಗಿ ಬಳಸುವಂತೆ ಜನರಿಗೆ ಕರೆ ನೀಡಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search