• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ?

Tulunadu News Posted On August 2, 2023
0


0
Shares
  • Share On Facebook
  • Tweet It

ಗ್ಯಾಸ್ ಸಿಲೆಂಡರ್ ಬೆಲೆ ನೂರು ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದರಿಂದ ವ್ಯಾಪಾರಿ, ಹೋಟೇಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ನೆಮ್ಮದಿಯನ್ನು ತಂದಿರಬಹುದು. ಭಾರತ್, ಇಂಡೇನ್, ಎಚ್ ಪಿಯಂತಹ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯನ್ನು ಇಳಿಸಿವೆ. ಗೃಹ ಬಳಕೆಯ 14.2 ಕೆಜಿ ಸಿಲೆಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್ ನಲ್ಲಿ ಸಿಲೆಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲೆಂಡರ್ ಬೆಲೆ 1,103 ರೂಪಾಯಿ ಇದೆ.
ಹಾಲಿನ ಬೆಲೆ ರಾಜ್ಯದಲ್ಲಿ ಮೂರು ರೂಪಾಯಿ ಲೀಟರಿಗೆ ಹೆಚ್ಚಿದ ಬೆನ್ನಲ್ಲೇ ಹೋಟೇಲುಗಳಲ್ಲಿ ಕಾಫಿ, ಟೀ ಬೆಲೆಯೂ ಎರಡರಿಂದ ಮೂರು ರೂಪಾಯಿ ಹೆಚ್ಚಿಸುವ ಕೆಲಸ ನಡೆದಿತ್ತು. ಅದೇ ರೀತಿಯಲ್ಲಿ ತಿಂಡಿಗಳಿಗೆ ಐದರಿಂದ ಏಳು ರೂಪಾಯಿ ಹಾಗೂ ಊಟಕ್ಕೆ ಹತ್ತರಿಂದ ಹದಿನೈದು ರೂಪಾಯಿ ಹೆಚ್ಚಿಸಲು ಹೋಟೇಲು ಮಾಲೀಕರ ಸಂಘ ನಿರ್ಧರಿಸಿದೆ. ಹಿಂದೆ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾದಾಗ ಕೇಂದ್ರ ಸರಕಾರವನ್ನು ಎಲ್ಲರೂ ದೂರುತ್ತಿದ್ದರು. ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ನಾವು ದರಗಳನ್ನು ಹೆಚ್ಚಿಸಬೇಕಾಗುತ್ತದೆ ಎಂದು ಹೋಟೇಲು ಮಾಲೀಕರು ಹೇಳುತ್ತಿದ್ದರು. ಈಗ ವಾಣಿಜ್ಯ ಸಿಲೆಂಡರ್ ಗಳಿಗೆ ನೂರು ರೂಪಾಯಿ ಇಳಿಸುವ ಮೂಲಕ ಹೋಟೇಲುಗಳ ಮಾಲೀಕರಿಗೆ ತಮ್ಮ ಆಹಾರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದಂತೆ ಕೇಂದ್ರ ಪರೋಕ್ಷ ಸಲಹೆ ನೀಡಿದಂತೆ ಆಗಿದೆ. ಆದರೆ ಯಾವುದೇ ವಸ್ತುಗಳ ಬೆಲೆ ಹೆಚ್ಚಳವಾಗುವಾಗ ತಮ್ಮ ದರಗಳನ್ನು ಕೂಡ ಅದೇ ರೀತಿಯಲ್ಲಿ ಹೆಚ್ಚಿಸುವ ಹೋಟೇಲಿನವರು ಅದೇ ಅಡುಗೆ ಅನಿಲ ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ ಎನ್ನುವುದು ಜನಸಾಮಾನ್ಯರ ಪ್ರಶ್ನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search