• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ?

Tulunadu News Posted On August 2, 2023
0


0
Shares
  • Share On Facebook
  • Tweet It

ಗ್ಯಾಸ್ ಸಿಲೆಂಡರ್ ಬೆಲೆ ನೂರು ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದರಿಂದ ವ್ಯಾಪಾರಿ, ಹೋಟೇಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ನೆಮ್ಮದಿಯನ್ನು ತಂದಿರಬಹುದು. ಭಾರತ್, ಇಂಡೇನ್, ಎಚ್ ಪಿಯಂತಹ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯನ್ನು ಇಳಿಸಿವೆ. ಗೃಹ ಬಳಕೆಯ 14.2 ಕೆಜಿ ಸಿಲೆಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್ ನಲ್ಲಿ ಸಿಲೆಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲೆಂಡರ್ ಬೆಲೆ 1,103 ರೂಪಾಯಿ ಇದೆ.
ಹಾಲಿನ ಬೆಲೆ ರಾಜ್ಯದಲ್ಲಿ ಮೂರು ರೂಪಾಯಿ ಲೀಟರಿಗೆ ಹೆಚ್ಚಿದ ಬೆನ್ನಲ್ಲೇ ಹೋಟೇಲುಗಳಲ್ಲಿ ಕಾಫಿ, ಟೀ ಬೆಲೆಯೂ ಎರಡರಿಂದ ಮೂರು ರೂಪಾಯಿ ಹೆಚ್ಚಿಸುವ ಕೆಲಸ ನಡೆದಿತ್ತು. ಅದೇ ರೀತಿಯಲ್ಲಿ ತಿಂಡಿಗಳಿಗೆ ಐದರಿಂದ ಏಳು ರೂಪಾಯಿ ಹಾಗೂ ಊಟಕ್ಕೆ ಹತ್ತರಿಂದ ಹದಿನೈದು ರೂಪಾಯಿ ಹೆಚ್ಚಿಸಲು ಹೋಟೇಲು ಮಾಲೀಕರ ಸಂಘ ನಿರ್ಧರಿಸಿದೆ. ಹಿಂದೆ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾದಾಗ ಕೇಂದ್ರ ಸರಕಾರವನ್ನು ಎಲ್ಲರೂ ದೂರುತ್ತಿದ್ದರು. ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ನಾವು ದರಗಳನ್ನು ಹೆಚ್ಚಿಸಬೇಕಾಗುತ್ತದೆ ಎಂದು ಹೋಟೇಲು ಮಾಲೀಕರು ಹೇಳುತ್ತಿದ್ದರು. ಈಗ ವಾಣಿಜ್ಯ ಸಿಲೆಂಡರ್ ಗಳಿಗೆ ನೂರು ರೂಪಾಯಿ ಇಳಿಸುವ ಮೂಲಕ ಹೋಟೇಲುಗಳ ಮಾಲೀಕರಿಗೆ ತಮ್ಮ ಆಹಾರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದಂತೆ ಕೇಂದ್ರ ಪರೋಕ್ಷ ಸಲಹೆ ನೀಡಿದಂತೆ ಆಗಿದೆ. ಆದರೆ ಯಾವುದೇ ವಸ್ತುಗಳ ಬೆಲೆ ಹೆಚ್ಚಳವಾಗುವಾಗ ತಮ್ಮ ದರಗಳನ್ನು ಕೂಡ ಅದೇ ರೀತಿಯಲ್ಲಿ ಹೆಚ್ಚಿಸುವ ಹೋಟೇಲಿನವರು ಅದೇ ಅಡುಗೆ ಅನಿಲ ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ ಎನ್ನುವುದು ಜನಸಾಮಾನ್ಯರ ಪ್ರಶ್ನೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...

  • Privacy Policy
  • Contact
© Tulunadu Infomedia.

Press enter/return to begin your search