• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ?

Tulunadu News Posted On August 2, 2023
0


0
Shares
  • Share On Facebook
  • Tweet It

ಗ್ಯಾಸ್ ಸಿಲೆಂಡರ್ ಬೆಲೆ ನೂರು ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದರಿಂದ ವ್ಯಾಪಾರಿ, ಹೋಟೇಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ನೆಮ್ಮದಿಯನ್ನು ತಂದಿರಬಹುದು. ಭಾರತ್, ಇಂಡೇನ್, ಎಚ್ ಪಿಯಂತಹ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯನ್ನು ಇಳಿಸಿವೆ. ಗೃಹ ಬಳಕೆಯ 14.2 ಕೆಜಿ ಸಿಲೆಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್ ನಲ್ಲಿ ಸಿಲೆಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲೆಂಡರ್ ಬೆಲೆ 1,103 ರೂಪಾಯಿ ಇದೆ.
ಹಾಲಿನ ಬೆಲೆ ರಾಜ್ಯದಲ್ಲಿ ಮೂರು ರೂಪಾಯಿ ಲೀಟರಿಗೆ ಹೆಚ್ಚಿದ ಬೆನ್ನಲ್ಲೇ ಹೋಟೇಲುಗಳಲ್ಲಿ ಕಾಫಿ, ಟೀ ಬೆಲೆಯೂ ಎರಡರಿಂದ ಮೂರು ರೂಪಾಯಿ ಹೆಚ್ಚಿಸುವ ಕೆಲಸ ನಡೆದಿತ್ತು. ಅದೇ ರೀತಿಯಲ್ಲಿ ತಿಂಡಿಗಳಿಗೆ ಐದರಿಂದ ಏಳು ರೂಪಾಯಿ ಹಾಗೂ ಊಟಕ್ಕೆ ಹತ್ತರಿಂದ ಹದಿನೈದು ರೂಪಾಯಿ ಹೆಚ್ಚಿಸಲು ಹೋಟೇಲು ಮಾಲೀಕರ ಸಂಘ ನಿರ್ಧರಿಸಿದೆ. ಹಿಂದೆ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾದಾಗ ಕೇಂದ್ರ ಸರಕಾರವನ್ನು ಎಲ್ಲರೂ ದೂರುತ್ತಿದ್ದರು. ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ನಾವು ದರಗಳನ್ನು ಹೆಚ್ಚಿಸಬೇಕಾಗುತ್ತದೆ ಎಂದು ಹೋಟೇಲು ಮಾಲೀಕರು ಹೇಳುತ್ತಿದ್ದರು. ಈಗ ವಾಣಿಜ್ಯ ಸಿಲೆಂಡರ್ ಗಳಿಗೆ ನೂರು ರೂಪಾಯಿ ಇಳಿಸುವ ಮೂಲಕ ಹೋಟೇಲುಗಳ ಮಾಲೀಕರಿಗೆ ತಮ್ಮ ಆಹಾರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದಂತೆ ಕೇಂದ್ರ ಪರೋಕ್ಷ ಸಲಹೆ ನೀಡಿದಂತೆ ಆಗಿದೆ. ಆದರೆ ಯಾವುದೇ ವಸ್ತುಗಳ ಬೆಲೆ ಹೆಚ್ಚಳವಾಗುವಾಗ ತಮ್ಮ ದರಗಳನ್ನು ಕೂಡ ಅದೇ ರೀತಿಯಲ್ಲಿ ಹೆಚ್ಚಿಸುವ ಹೋಟೇಲಿನವರು ಅದೇ ಅಡುಗೆ ಅನಿಲ ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ ಎನ್ನುವುದು ಜನಸಾಮಾನ್ಯರ ಪ್ರಶ್ನೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search