• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ?

Tulunadu News Posted On August 2, 2023


  • Share On Facebook
  • Tweet It

ಗ್ಯಾಸ್ ಸಿಲೆಂಡರ್ ಬೆಲೆ ನೂರು ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದರಿಂದ ವ್ಯಾಪಾರಿ, ಹೋಟೇಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ನೆಮ್ಮದಿಯನ್ನು ತಂದಿರಬಹುದು. ಭಾರತ್, ಇಂಡೇನ್, ಎಚ್ ಪಿಯಂತಹ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯನ್ನು ಇಳಿಸಿವೆ. ಗೃಹ ಬಳಕೆಯ 14.2 ಕೆಜಿ ಸಿಲೆಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್ ನಲ್ಲಿ ಸಿಲೆಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲೆಂಡರ್ ಬೆಲೆ 1,103 ರೂಪಾಯಿ ಇದೆ.
ಹಾಲಿನ ಬೆಲೆ ರಾಜ್ಯದಲ್ಲಿ ಮೂರು ರೂಪಾಯಿ ಲೀಟರಿಗೆ ಹೆಚ್ಚಿದ ಬೆನ್ನಲ್ಲೇ ಹೋಟೇಲುಗಳಲ್ಲಿ ಕಾಫಿ, ಟೀ ಬೆಲೆಯೂ ಎರಡರಿಂದ ಮೂರು ರೂಪಾಯಿ ಹೆಚ್ಚಿಸುವ ಕೆಲಸ ನಡೆದಿತ್ತು. ಅದೇ ರೀತಿಯಲ್ಲಿ ತಿಂಡಿಗಳಿಗೆ ಐದರಿಂದ ಏಳು ರೂಪಾಯಿ ಹಾಗೂ ಊಟಕ್ಕೆ ಹತ್ತರಿಂದ ಹದಿನೈದು ರೂಪಾಯಿ ಹೆಚ್ಚಿಸಲು ಹೋಟೇಲು ಮಾಲೀಕರ ಸಂಘ ನಿರ್ಧರಿಸಿದೆ. ಹಿಂದೆ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾದಾಗ ಕೇಂದ್ರ ಸರಕಾರವನ್ನು ಎಲ್ಲರೂ ದೂರುತ್ತಿದ್ದರು. ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ನಾವು ದರಗಳನ್ನು ಹೆಚ್ಚಿಸಬೇಕಾಗುತ್ತದೆ ಎಂದು ಹೋಟೇಲು ಮಾಲೀಕರು ಹೇಳುತ್ತಿದ್ದರು. ಈಗ ವಾಣಿಜ್ಯ ಸಿಲೆಂಡರ್ ಗಳಿಗೆ ನೂರು ರೂಪಾಯಿ ಇಳಿಸುವ ಮೂಲಕ ಹೋಟೇಲುಗಳ ಮಾಲೀಕರಿಗೆ ತಮ್ಮ ಆಹಾರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದಂತೆ ಕೇಂದ್ರ ಪರೋಕ್ಷ ಸಲಹೆ ನೀಡಿದಂತೆ ಆಗಿದೆ. ಆದರೆ ಯಾವುದೇ ವಸ್ತುಗಳ ಬೆಲೆ ಹೆಚ್ಚಳವಾಗುವಾಗ ತಮ್ಮ ದರಗಳನ್ನು ಕೂಡ ಅದೇ ರೀತಿಯಲ್ಲಿ ಹೆಚ್ಚಿಸುವ ಹೋಟೇಲಿನವರು ಅದೇ ಅಡುಗೆ ಅನಿಲ ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ ಎನ್ನುವುದು ಜನಸಾಮಾನ್ಯರ ಪ್ರಶ್ನೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search