• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ?

Tulunadu News Posted On August 2, 2023
0


0
Shares
  • Share On Facebook
  • Tweet It

ಗ್ಯಾಸ್ ಸಿಲೆಂಡರ್ ಬೆಲೆ ನೂರು ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಇದರಿಂದ ವ್ಯಾಪಾರಿ, ಹೋಟೇಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ನೆಮ್ಮದಿಯನ್ನು ತಂದಿರಬಹುದು. ಭಾರತ್, ಇಂಡೇನ್, ಎಚ್ ಪಿಯಂತಹ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯನ್ನು ಇಳಿಸಿವೆ. ಗೃಹ ಬಳಕೆಯ 14.2 ಕೆಜಿ ಸಿಲೆಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್ ನಲ್ಲಿ ಸಿಲೆಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲೆಂಡರ್ ಬೆಲೆ 1,103 ರೂಪಾಯಿ ಇದೆ.
ಹಾಲಿನ ಬೆಲೆ ರಾಜ್ಯದಲ್ಲಿ ಮೂರು ರೂಪಾಯಿ ಲೀಟರಿಗೆ ಹೆಚ್ಚಿದ ಬೆನ್ನಲ್ಲೇ ಹೋಟೇಲುಗಳಲ್ಲಿ ಕಾಫಿ, ಟೀ ಬೆಲೆಯೂ ಎರಡರಿಂದ ಮೂರು ರೂಪಾಯಿ ಹೆಚ್ಚಿಸುವ ಕೆಲಸ ನಡೆದಿತ್ತು. ಅದೇ ರೀತಿಯಲ್ಲಿ ತಿಂಡಿಗಳಿಗೆ ಐದರಿಂದ ಏಳು ರೂಪಾಯಿ ಹಾಗೂ ಊಟಕ್ಕೆ ಹತ್ತರಿಂದ ಹದಿನೈದು ರೂಪಾಯಿ ಹೆಚ್ಚಿಸಲು ಹೋಟೇಲು ಮಾಲೀಕರ ಸಂಘ ನಿರ್ಧರಿಸಿದೆ. ಹಿಂದೆ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾದಾಗ ಕೇಂದ್ರ ಸರಕಾರವನ್ನು ಎಲ್ಲರೂ ದೂರುತ್ತಿದ್ದರು. ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ನಾವು ದರಗಳನ್ನು ಹೆಚ್ಚಿಸಬೇಕಾಗುತ್ತದೆ ಎಂದು ಹೋಟೇಲು ಮಾಲೀಕರು ಹೇಳುತ್ತಿದ್ದರು. ಈಗ ವಾಣಿಜ್ಯ ಸಿಲೆಂಡರ್ ಗಳಿಗೆ ನೂರು ರೂಪಾಯಿ ಇಳಿಸುವ ಮೂಲಕ ಹೋಟೇಲುಗಳ ಮಾಲೀಕರಿಗೆ ತಮ್ಮ ಆಹಾರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದಂತೆ ಕೇಂದ್ರ ಪರೋಕ್ಷ ಸಲಹೆ ನೀಡಿದಂತೆ ಆಗಿದೆ. ಆದರೆ ಯಾವುದೇ ವಸ್ತುಗಳ ಬೆಲೆ ಹೆಚ್ಚಳವಾಗುವಾಗ ತಮ್ಮ ದರಗಳನ್ನು ಕೂಡ ಅದೇ ರೀತಿಯಲ್ಲಿ ಹೆಚ್ಚಿಸುವ ಹೋಟೇಲಿನವರು ಅದೇ ಅಡುಗೆ ಅನಿಲ ಸಿಲೆಂಡರ್ ಬೆಲೆ ಇಳಿದಾಗ ದರಗಳನ್ನು ಇಳಿಸುತ್ತಾರಾ ಎನ್ನುವುದು ಜನಸಾಮಾನ್ಯರ ಪ್ರಶ್ನೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search