• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023


  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search