• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023


  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search