• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search