• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search