• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023


  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search