• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search