• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಉತ್ಖನನ ಇಲ್ಲದೇ ಸರ್ವೆಗೆ ಅನುಮತಿ

Hanumantha Kamath Posted On August 4, 2023
0


0
Shares
  • Share On Facebook
  • Tweet It

ಎರಡು ಮಹತ್ವದ ಆದೇಶಗಳನ್ನು ಅಗಸ್ಟ್ 4 ರಂದು ಸುಪ್ರೀಂಕೋರ್ಟ್ ನೀಡಿದೆ. ಒಂದನೇಯದಾಗಿ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಕಾಶೀ ವಿಶ್ವನಾಥ ದೇವಸ್ಥಾನಕ್ಕೆ ತಾಗಿಕೊಂಡಿರುವ ಗ್ಯಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸರ್ವೆ ನಡೆಸಲು ಸುಪ್ರೀಂಕೋರ್ಟ್ ರಾಷ್ಟ್ರದ ಪುರಾತತ್ವ ಇಲಾಖೆಗೆ ತಡೆ ನೀಡಿಲ್ಲ. ಈ ಬಗ್ಗೆ ಹೇಳಿರುವ ಸರ್ವೋಚ್ಚ ನ್ಯಾಯಾಲಯ ಈಗಾಗಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದಲ್ಲಿ ವೈಜ್ಞಾನಿಕ ಸರ್ವೆಗೆ ಅನುಮತಿ ನೀಡಲಾಗಿದೆ. ಆದರೆ ನಾವು ಅದನ್ನು ಇನ್ನು ತಡೆಯಲು ಹೋಗುವುದಿಲ್ಲ. ಆದರೆ ಯಾವುದೇ ಕಾರಣಕ್ಕೂ ಆ ಪ್ರದೇಶದಲ್ಲಿ ಉತ್ಖನನ ಮಾಡುವಂತಿಲ್ಲ. ಒಂದು ವೇಳೆ ಹಾಗೇನಾದರೂ ಮಾಡುವುದಿದ್ದರೂ ಮತ್ತೆ ನ್ಯಾಯಾಲಯದಿಂದ ಪೂರ್ವಾನುಮತಿಯನ್ನು ಪಡೆಯಬೇಕು ಎಂದು ಹೇಳಿದೆ. ಇನ್ನು ವೈಜ್ಞಾನಿಕ ಸರ್ವೆಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸಿದೆ. ಈ ಸರ್ವೆಗೆ ಅನುಮತಿ ನೀಡಬಾರದು ಎಂದು ಮುಸ್ಲಿಂ ನಿಯೋಗ ಸುಪ್ರೀಂ ಕೋರ್ಟಿನಲ್ಲಿ ಮನವಿ ಮಾಡಿತ್ತು. ಆದರೆ ಗ್ಯಾನವಾಪಿ ಮಸೀದಿಯ ಯಾವುದೇ ಏರಿಯಾ ಅಥವಾ ಗೋಡೆ ಸಹಿತ ಯಾವುದೇ ವಸ್ತುವಿಗೂ ಹಾನಿಯಾಗದಂತೆ ಸರ್ವೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಈ ಮೂಲಕ ಹಿಂದೂ ಆಸ್ತಿಕ ಬಾಂಧವರ ಬಹುದಿನಗಳ ಕನಸು ನನಸಾಗಿದೆ. ಅಷ್ಟಕ್ಕೂ ವೈಜ್ಞಾನಿಕ ಸರ್ವೆ ನಡೆಸುವುದನ್ನು ಮುಸ್ಲಿಂ ಬಾಂಧವರು ವಿರೋಧಿಸುವ ಅಗತ್ಯವೇ ಇರಲಿಲ್ಲ. ಯಾಕೆಂದರೆ ಇದರಿಂದ ಗ್ಯಾನವಾಪಿಯ ಮೂಲ ಅಸ್ತಿತ್ವಕ್ಕೆ ಯಾವ ದಕ್ಕೆಯೂ ಬರುವುದಿಲ್ಲ. ಅವರ ವಿಶ್ವಾಸಕ್ಕೂ ಎಲ್ಲಿಯೂ ತೊಂದರೆ ಆಗುವುದಿಲ್ಲ. ವೈಜ್ಞಾನಿಕವಾಗಿ ಮಾತ್ರ ಇಲ್ಲಿ ಸರ್ವೆ ನಡೆಯುತ್ತದೆ. ಆ ಸರ್ವೆಯ ಬಳಿಕ ನೈಜ ವಿಷಯ ಬೆಳಕಿಗೆ ಬರಬಹುದು. ಈ ಸರ್ವೆಯಿಂದ ಆ ಪ್ರದೇಶದಲ್ಲಿ ಹಿಂದೆ ಏನಿತ್ತು ಎನ್ನುವುದರ ಬಗ್ಗೆ ಮಾಹಿತಿ ದೊರೆಯಲಿದೆ. ಆದರೆ ಮುಸ್ಲಿಂ ನಿಯೋಗದ ಪ್ರಕಾರ ಇದು ಹಿಂದಿನ ಗಾಯವನ್ನು ಮತ್ತೆ ಕೆದಕುವ ಪ್ರಯತ್ನ ಎಂದು ಹೇಳಲಾಗಿದೆ. ಆದರೆ ಇದರಿಂದ ಸತ್ಯ ಗೊತ್ತಾಗುತ್ತದೆ ಎನ್ನುವುದು ಹಿಂದೂ ನಾಗರಿಕರ ಅಭಿಮತ.

ರಾಹುಲ್ ಗೆ ಸಮಾಧಾನ ನೀಡಿದ ಸುಪ್ರೀಂಕೋರ್ಟ್!

ಇನ್ನು ಸುಪ್ರೀಂಕೋರ್ಟ್ ಇವತ್ತು ಮತ್ತೊಂದು ಮಹತ್ವ ಆದೇಶ ನೀಡಿದೆ. ಆ ಮೂಲಕ ರಾಹುಲ್ ಗಾಂಧಿಯವರು ಸದ್ಯದ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಬಹುಶ: ಕಾಂಗ್ರೆಸ್ಸಿಗರು ಇದನ್ನು ಸಂಭ್ರಮದಿಂದ ಆಚರಿಸಬಹುದು. ಜನಪ್ರತಿನಿಧಿಯ ಕಾಯ್ದೆಯ ಪ್ರಕಾರ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಅವರ ವಿರುದ್ಧದ ಶಿಕ್ಷೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರ ಅರ್ಥ ಪ್ರಕರಣ ಬರ್ಖಾಸ್ತುಗೊಂಡಿದೆ ಎಂದಲ್ಲ. ಆದರೆ ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದ ರಾಹುಲ್ ಅವರ ಸಂಸದ ಸ್ಥಾನ ಊರ್ಜಿತದಲ್ಲಿರುತ್ತದೆ. ಅವರು ಅಧಿವೇಶನದಲ್ಲಿ ಭಾಗವಹಿಸಬಹುದು. ಅವರಿಗೆ ದೆಹಲಿಯಲ್ಲಿ ಸಂಸದರ ನಿವಾಸ ಸಿಗುತ್ತದೆ. ಅವರು ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುವುದು ಮುಂದುವರೆಯುತ್ತದೆ. ಕೆಳ ನ್ಯಾಯಾಲಯದ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಿರುವ ಸುಪ್ರೀಂಕೋರ್ಟ್ ಎರಡು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿರುವ ಕಾರಣಗಳ ಬಗ್ಗೆ ಹೇಳಿಲ್ಲ ಎಂದು ತಿಳಿಸಿದೆ. ಮೋದಿಯವರ ಉಪನಾಮದ ಬಗ್ಗೆ ವ್ಯಂಗ್ಯಭರಿತ ಭಾಷೆಯಲ್ಲಿ ಮಾತನಾಡಿ ಎರಡು ವರ್ಷದ ಜೈಲು ಶಿಕ್ಷೆಗೆ ರಾಹುಲ್ ಒಳಗಾಗಿದ್ದರು. ಮೋದಿ ಹೆಸರಿನಲ್ಲಿರುವವರೆಲ್ಲರೂ ಕಳ್ಳರೇಕೆ ಎನ್ನುವ ಅರ್ಥದಲ್ಲಿ ಮೋದಿಯವರನ್ನು ಟೀಕಿಸಿ ರಾಹುಲ್ ಕರ್ನಾಟಕದ ಕೋಲಾರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Hanumantha Kamath September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Hanumantha Kamath September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search