• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಮನ ಸೆಳೆಯಲಿರುವ ನೂತನ ರೈಲು ನಿಲ್ದಾಣಗಳು 2025 ಕ್ಕೆ ಸಿದ್ಧ

Tulunadu News Posted On August 5, 2023


  • Share On Facebook
  • Tweet It

ದೇಶದ ಒಟ್ಟು 508 ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಅಗಸ್ಟ್ 6 ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ಮಾಡಲಿದ್ದಾರೆ. ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ರೈಲು ನಿಲ್ದಾಣಗಳು ಅಭಿವೃದ್ಧಿಗೊಳ್ಳಲು ಶಿಲಾನ್ಯಾಸ ನಡೆದಿರುವುದು ಇದೇ ಪ್ರಥಮ ಎಂದು ಹೇಳಲಾಗುತ್ತಿದೆ. 2025 ರ ಒಳಗೆ ಇಷ್ಟು ರೈಲು ನಿಲ್ದಾಣಗಳು ಅಭಿವೃದ್ಧಿಯಾಗಲಿವೆ ಎಂದು ಹಿರಿಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಂಕನಾಡಿ ಹೊರವಲಯದಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಕೂಡ ಇದೇ ಪಟ್ಟಿಯಲ್ಲಿದ್ದು, ಅಗಸ್ಟ್ 6 ರಂದು ಅಭಿವೃದ್ಧಿಗೆ ಶಿಲಾನ್ಯಾಸಗೊಳ್ಳಲಿದೆ. ಅಮೃತ ಭಾರತ ಸ್ಟೇಶನ್ ಸ್ಕೀಮ್ ನಲ್ಲಿ ಅಂದಾಜು 24,470 ಕೋಟಿ ರೂಪಾಯಿ ಇಷ್ಟು ರೈಲು ನಿಲ್ದಾಣಗಳು ಅಭಿವೃದ್ಧಿಯ ಪಥದಲ್ಲಿ ಸಾಗಲಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ರೈಲ್ವೆ ಸಚಿವರಾದ ಅಶ್ವನಿ ವೈಷ್ಣವ್ ಅವರು ” ಪ್ರಧಾನ ಮಂತ್ರಿಗಳು ಸ್ವತ: ಈ ರೈಲು ನಿಲ್ದಾಣಗಳ ಅಭಿವೃದ್ಧಿಯ ರೂಪುರೇಶೆಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿ ಸೂಚನೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದರು. 508 ರೈಲು ನಿಲ್ದಾಣಗಳಲ್ಲಿ ಉತ್ತರ ಪ್ರದೇಶ ಮತ್ತು ರಾಜಸ್ಥಾನದ 55, ಬಿಹಾರದ 49, ಮಹಾರಾಷ್ಟ್ರದ 44, ಪಶ್ಚಿಮ ಬಂಗಾಲದ 37, ಮಧ್ಯಪ್ರದೇಶದ 34, ಅಸ್ಸಾಂನ 32, ಓಡಿಶಾದ 25, ಪಂಜಾಬಿನ 22, ಗುಜರಾತ್ ಮತ್ತು ತೆಲಂಗಾಣದ 21, ಜಾರ್ಖಂಡಿನ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನ 18, ಹರ್ಯಾಣದ 15, ಕರ್ನಾಟಕದ 13 ರೈಲು ನಿಲ್ದಾಣಗಳು ಸೇರಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search