• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಬ್ಬಳ್ಳಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ upload!

Tulunadu News Posted On August 5, 2023
0


0
Shares
  • Share On Facebook
  • Tweet It

ಉಡುಪಿ ಖಾಸಗಿ ಕಾಲೇಜಿನ ಟಾಯ್ಲೆಟಿನಲ್ಲಿ ವಿಡಿಯೋ ಪ್ರಕರಣ ಇನ್ನು ಕೂಡ ಜೀವಂತವಾಗಿರುವಾಗಲೇ ಹುಬ್ಬಳ್ಳಿಯ ಕಾಲೇಜಿನ ಇನ್ಟಾಗ್ರಾಂ ಹ್ಯಾಕ್ ಮಾಡಿ ಅದರಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯರ ಎಡಿಟ್ ಮಾಡಲಾಗಿರುವ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಷಯ ಈಗ ಪೊಲೀಸ್ ಠಾಣೆಯ ಮೆಟ್ಟಲೇರಿದೆ. ಮೂರು ತಿಂಗಳ ಹಿಂದೆಯೇ ಈ ಘಟನೆ ನಡೆದಿದ್ದು, ಕಾಲೇಜು ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ಈ ವಿಷಯ ತಂದಿದ್ದರು. ಆದರೆ ಕಾಲೇಜಿನ ಹೆಸರು ಹಾಳಾಗುತ್ತದೆ ಎನ್ನುವ ಕಾರಣಕ್ಕೆ ಆಡಳಿತ ಮಂಡಳಿ ಏನೂ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಉತ್ತೇಜಿತಗೊಂಡ ದುರುಳರು ಇನ್ನಷ್ಟು ಫೋಟೋಗಳನ್ನು ಅಪಲೋಡ್ ಮಾಡಿದ್ದರು. ಇನ್ನು ನಮ್ಮನ್ನು ಯಾರೂ ಹಿಡಿಯಲು ಆಗುವುದಿಲ್ಲ, ನೀವು ಯಾರಿಗೆ ದೂರು ಕೊಟ್ಟರೂ ಏನೂ ಮಾಡಲು ಆಗುವುದಿಲ್ಲ, ನಮ್ಮ ಬಳಿ ಇನ್ನಷ್ಟು ಫೋಟೋ ಇದೆ ಎಂದು ಬ್ಲ್ಯಾಕ್ ಮೇಲ್ ಕೂಡ ಮಾಡಿದ್ದರು. ಆಡಳಿತ ಮಂಡಳಿ ಈ ಬಗ್ಗೆ ಏನೂ ಮಾಡುವುದಿಲ್ಲ ಎಂದು ಗ್ಯಾರಂಟಿಯಾಗುತ್ತಿದ್ದಂತೆ ಸ್ವತ: ಯುವತಿಯರೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿ ಕೇಸು ದಾಖಲಿಸಿಕೊಂಡಿದ್ದಾರೆ. ಈಗ ಸುದ್ದಿ ವೈರಲ್ ಆಗುತ್ತಿದ್ದಂತೆ ಕಾಶ್ಮಿರಾ19990_0 ಇನ್ ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್ ಡಿಲೀಟ್ ಆಗಿದೆ. ಕಾಲೇಜಿನ ವಿದ್ಯಾರ್ತಿನಿಯರ ಫೋಟೋಗಳನ್ನು ಯಾರೋ ಒಳಗಿನವರೇ ಅಡಿಟ್ ಮಾಡಿ ಹಾಕುತ್ತಿರುವ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಹೀಗಾಗಿ ಈ ಪ್ರಕರಣ ಸಂಬಂಧ ಹಲವು ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪೊಲೀಸರ ತನಿಖೆ ಶುರುವಾಗುತ್ತಲೇ ಫೋಟೋ ಡಿಲೀಟ್ ಮಾಡಿರುವುದರಿಂದ “ತನ್ನನ್ನು ಯಾರೂ ಹಿಡಿಯಲು ಆಗುವುದಿಲ್ಲ” ಎಂದು ಧೈರ್ಯದಿಂದ ಮೇಸೆಜ್ ಮಾಡಿದ್ದ ವ್ಯಕ್ತಿ ಹಾಗೆ ಯಾಕೆ ಮಾಡಿದ ಎನ್ನುವ ಅನುಮಾನ ಎಲ್ಲರಿಗೂ ಶುರುವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search