• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ರಾಜ್ ಕುಟುಂಬಕ್ಕೆ ಮತ್ತೊಂದು ಅಘಾತ!

Tulunadu News Posted On August 7, 2023
0


0
Shares
  • Share On Facebook
  • Tweet It

ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಅವರು ಬ್ಯಾಂಕಾಂಕ್ ಪ್ರವಾಸದಲ್ಲಿದ್ದಾಗ ಹಠಾತ್ ಹೃದಯಾಘಾತವಾಗಿ ಮರಣ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸ್ಪಂದನಾ ಅವರು ಕರ್ನಾಟಕದ ಖ್ಯಾತ ಪೊಲೀಸ್ ಆಫೀಸರ್ ಬಿ.ಕೆ.ಶಿವರಾಮ್ ಅವರ ಪುತ್ರಿ. ಶಿವರಾಮ್ ಅವರು ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಗಳಿಸಿದ್ದಾರೆ. ವಿಜಯ ರಾಘವೇಂದ್ರ ಅವರು ಕನ್ನಡದ ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಸಹೋದರ ಚಿನ್ನೇಗೌಡರ ಹಿರಿಯ ಪುತ್ರ. ಸ್ಪಂದನಾ ಅವರು 2007 ರಲ್ಲಿ ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರನ್ನು arranged ಮದುವೆಯಾಗಿದ್ದರು. ಇವರಿಬ್ಬರಿಗೂ ಶೌರ್ಯ ಎನ್ನುವ ಮಗನಿದ್ದಾನೆ. ಇತ್ತೀಚೆಗೆ ಸ್ಪಂದನಾ ಅವರು ಬ್ಯಾಂಕಾಂಕ್ ಪ್ರವಾಸಕ್ಕೆ ಕುಟುಂಬದವರೊಂದಿಗೆ ತೆರಳಿದ್ದರು.
ವಿಜಯ ರಾಘವೇಂದ್ರ ಅವರ ಸಹೋದರ ನಟ ಶ್ರೀ ಮುರುಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಅತ್ತಿಗೆ ರಾತ್ರಿ ಮಲಗಿದಾಗ ನಿಧನರಾಗಿದ್ದಾರೆ ಎಂದು ಅಣ್ಣ ತಮಗೆ ಫೋನ್ ಮಾಡಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಾವೀಗ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಕಣ್ಣೀರು ಸುರಿಸುತ್ತಾ ತಿಳಿಸಿದರು. ಸ್ಪಂದನಾ ಅವರ ತಂದೆ ಹಾಗೂ ಸಹೋದರ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಇದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಬ್ಯಾಂಕಾಂಕಿಗೆ ತೆರಳಿದ್ದಾರೆ. ಪಾರ್ಥಿವ ಶರೀರವನ್ನು ಮಂಗಳವಾರ ಬೆಂಗಳೂರಿಗೆ ತರುವ ಪ್ರಕ್ರಿಯೆ ಆರಂಭವಾಗಿದೆ.
ಸ್ಪಂದನಾ ಅವರು ರವಿಚಂದ್ರನ್ ಅವರ ಜೊತೆ 2016 ರಲ್ಲಿ ಅಪೂರ್ವ ಸಿನೆಮಾದಲ್ಲಿ ನಟಿಸಿದ್ದಾರೆ. ಅವರು ವಿಜಯ ರಾಘವೇಂದ್ರ ಅವರು ಕೆಲವು ಸಿನೆಮಾಗಳಿಗೆ ನಿರ್ಮಾಪಕಿಯಾಗಿಯೂ ಕೆಲಸ ಮಾಡಿದ್ದಾರೆ. ತುಂಬಾ ಅನೋನ್ಯ ಕುಟುಂಬದಲ್ಲಿ ಸಡನ್ನಾಗಿ ಜವರಾಯ ಹೀಗೆ ಮಾಡಿದ್ದು ನೋಡಿ ಚಿತ್ರರಂಗವೇ ದಂಗಾಗಿಬಿಟ್ಟಿದೆ. ಕಳೆದ ಕೆಲವು ಸಮಯದಿಂದ ಡಯಟ್ ನಲ್ಲಿದ್ದ ಸ್ಪಂದನಾ 16 ಕೆಜಿ ತೂಕ ಇಳಿಸಿಕೊಂಡಿದ್ದರು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search