• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ರಾಜ್ ಕುಟುಂಬಕ್ಕೆ ಮತ್ತೊಂದು ಅಘಾತ!

Tulunadu News Posted On August 7, 2023
0


0
Shares
  • Share On Facebook
  • Tweet It

ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಅವರು ಬ್ಯಾಂಕಾಂಕ್ ಪ್ರವಾಸದಲ್ಲಿದ್ದಾಗ ಹಠಾತ್ ಹೃದಯಾಘಾತವಾಗಿ ಮರಣ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸ್ಪಂದನಾ ಅವರು ಕರ್ನಾಟಕದ ಖ್ಯಾತ ಪೊಲೀಸ್ ಆಫೀಸರ್ ಬಿ.ಕೆ.ಶಿವರಾಮ್ ಅವರ ಪುತ್ರಿ. ಶಿವರಾಮ್ ಅವರು ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಗಳಿಸಿದ್ದಾರೆ. ವಿಜಯ ರಾಘವೇಂದ್ರ ಅವರು ಕನ್ನಡದ ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಸಹೋದರ ಚಿನ್ನೇಗೌಡರ ಹಿರಿಯ ಪುತ್ರ. ಸ್ಪಂದನಾ ಅವರು 2007 ರಲ್ಲಿ ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರನ್ನು arranged ಮದುವೆಯಾಗಿದ್ದರು. ಇವರಿಬ್ಬರಿಗೂ ಶೌರ್ಯ ಎನ್ನುವ ಮಗನಿದ್ದಾನೆ. ಇತ್ತೀಚೆಗೆ ಸ್ಪಂದನಾ ಅವರು ಬ್ಯಾಂಕಾಂಕ್ ಪ್ರವಾಸಕ್ಕೆ ಕುಟುಂಬದವರೊಂದಿಗೆ ತೆರಳಿದ್ದರು.
ವಿಜಯ ರಾಘವೇಂದ್ರ ಅವರ ಸಹೋದರ ನಟ ಶ್ರೀ ಮುರುಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಅತ್ತಿಗೆ ರಾತ್ರಿ ಮಲಗಿದಾಗ ನಿಧನರಾಗಿದ್ದಾರೆ ಎಂದು ಅಣ್ಣ ತಮಗೆ ಫೋನ್ ಮಾಡಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಾವೀಗ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಕಣ್ಣೀರು ಸುರಿಸುತ್ತಾ ತಿಳಿಸಿದರು. ಸ್ಪಂದನಾ ಅವರ ತಂದೆ ಹಾಗೂ ಸಹೋದರ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಇದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಬ್ಯಾಂಕಾಂಕಿಗೆ ತೆರಳಿದ್ದಾರೆ. ಪಾರ್ಥಿವ ಶರೀರವನ್ನು ಮಂಗಳವಾರ ಬೆಂಗಳೂರಿಗೆ ತರುವ ಪ್ರಕ್ರಿಯೆ ಆರಂಭವಾಗಿದೆ.
ಸ್ಪಂದನಾ ಅವರು ರವಿಚಂದ್ರನ್ ಅವರ ಜೊತೆ 2016 ರಲ್ಲಿ ಅಪೂರ್ವ ಸಿನೆಮಾದಲ್ಲಿ ನಟಿಸಿದ್ದಾರೆ. ಅವರು ವಿಜಯ ರಾಘವೇಂದ್ರ ಅವರು ಕೆಲವು ಸಿನೆಮಾಗಳಿಗೆ ನಿರ್ಮಾಪಕಿಯಾಗಿಯೂ ಕೆಲಸ ಮಾಡಿದ್ದಾರೆ. ತುಂಬಾ ಅನೋನ್ಯ ಕುಟುಂಬದಲ್ಲಿ ಸಡನ್ನಾಗಿ ಜವರಾಯ ಹೀಗೆ ಮಾಡಿದ್ದು ನೋಡಿ ಚಿತ್ರರಂಗವೇ ದಂಗಾಗಿಬಿಟ್ಟಿದೆ. ಕಳೆದ ಕೆಲವು ಸಮಯದಿಂದ ಡಯಟ್ ನಲ್ಲಿದ್ದ ಸ್ಪಂದನಾ 16 ಕೆಜಿ ತೂಕ ಇಳಿಸಿಕೊಂಡಿದ್ದರು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search