• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ರಾಜ್ ಕುಟುಂಬಕ್ಕೆ ಮತ್ತೊಂದು ಅಘಾತ!

Tulunadu News Posted On August 7, 2023
0


0
Shares
  • Share On Facebook
  • Tweet It

ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಅವರು ಬ್ಯಾಂಕಾಂಕ್ ಪ್ರವಾಸದಲ್ಲಿದ್ದಾಗ ಹಠಾತ್ ಹೃದಯಾಘಾತವಾಗಿ ಮರಣ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸ್ಪಂದನಾ ಅವರು ಕರ್ನಾಟಕದ ಖ್ಯಾತ ಪೊಲೀಸ್ ಆಫೀಸರ್ ಬಿ.ಕೆ.ಶಿವರಾಮ್ ಅವರ ಪುತ್ರಿ. ಶಿವರಾಮ್ ಅವರು ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಗಳಿಸಿದ್ದಾರೆ. ವಿಜಯ ರಾಘವೇಂದ್ರ ಅವರು ಕನ್ನಡದ ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಸಹೋದರ ಚಿನ್ನೇಗೌಡರ ಹಿರಿಯ ಪುತ್ರ. ಸ್ಪಂದನಾ ಅವರು 2007 ರಲ್ಲಿ ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರನ್ನು arranged ಮದುವೆಯಾಗಿದ್ದರು. ಇವರಿಬ್ಬರಿಗೂ ಶೌರ್ಯ ಎನ್ನುವ ಮಗನಿದ್ದಾನೆ. ಇತ್ತೀಚೆಗೆ ಸ್ಪಂದನಾ ಅವರು ಬ್ಯಾಂಕಾಂಕ್ ಪ್ರವಾಸಕ್ಕೆ ಕುಟುಂಬದವರೊಂದಿಗೆ ತೆರಳಿದ್ದರು.
ವಿಜಯ ರಾಘವೇಂದ್ರ ಅವರ ಸಹೋದರ ನಟ ಶ್ರೀ ಮುರುಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಅತ್ತಿಗೆ ರಾತ್ರಿ ಮಲಗಿದಾಗ ನಿಧನರಾಗಿದ್ದಾರೆ ಎಂದು ಅಣ್ಣ ತಮಗೆ ಫೋನ್ ಮಾಡಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಾವೀಗ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಕಣ್ಣೀರು ಸುರಿಸುತ್ತಾ ತಿಳಿಸಿದರು. ಸ್ಪಂದನಾ ಅವರ ತಂದೆ ಹಾಗೂ ಸಹೋದರ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಇದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಬ್ಯಾಂಕಾಂಕಿಗೆ ತೆರಳಿದ್ದಾರೆ. ಪಾರ್ಥಿವ ಶರೀರವನ್ನು ಮಂಗಳವಾರ ಬೆಂಗಳೂರಿಗೆ ತರುವ ಪ್ರಕ್ರಿಯೆ ಆರಂಭವಾಗಿದೆ.
ಸ್ಪಂದನಾ ಅವರು ರವಿಚಂದ್ರನ್ ಅವರ ಜೊತೆ 2016 ರಲ್ಲಿ ಅಪೂರ್ವ ಸಿನೆಮಾದಲ್ಲಿ ನಟಿಸಿದ್ದಾರೆ. ಅವರು ವಿಜಯ ರಾಘವೇಂದ್ರ ಅವರು ಕೆಲವು ಸಿನೆಮಾಗಳಿಗೆ ನಿರ್ಮಾಪಕಿಯಾಗಿಯೂ ಕೆಲಸ ಮಾಡಿದ್ದಾರೆ. ತುಂಬಾ ಅನೋನ್ಯ ಕುಟುಂಬದಲ್ಲಿ ಸಡನ್ನಾಗಿ ಜವರಾಯ ಹೀಗೆ ಮಾಡಿದ್ದು ನೋಡಿ ಚಿತ್ರರಂಗವೇ ದಂಗಾಗಿಬಿಟ್ಟಿದೆ. ಕಳೆದ ಕೆಲವು ಸಮಯದಿಂದ ಡಯಟ್ ನಲ್ಲಿದ್ದ ಸ್ಪಂದನಾ 16 ಕೆಜಿ ತೂಕ ಇಳಿಸಿಕೊಂಡಿದ್ದರು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search