• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾವಾಗ ಸಿಗಲಿದೆ ಗುತ್ತಿಗೆದಾರರ ಬಾಕಿ?

Tulunadu News Posted On August 7, 2023
0


0
Shares
  • Share On Facebook
  • Tweet It

ಬಿಲ್ ಪಾವತಿಸಿ ಅಥವಾ ದಯಾಮರಣ ಕರುಣಿಸಿ ಎಂದು ಬಿಬಿಎಂಪಿ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ 2000 ಕೋಟಿ ರೂ ಲಭ್ಯವಿದ್ದರೂ ಸುಮಾರು 26 ತಿಂಗಳುಗಳಿಂದ ಗುತ್ತಿಗೆದಾರರು ಕಾರ್ಯ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲಾಗಿಲ್ಲ. ಈ ಕೂಡಲೇ ಹಣ ಪಾವತಿಸಿ, ಇಲ್ಲದಿದ್ದರೆ 500 ಮಂದಿ ಬಿಬಿಎಂಪಿ ಗುತ್ತಿಗೆದಾರರಿಗೆ ದಯಾಮರಣ ಕರುಣಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆಯುತ್ತೇವೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಹಿಂದಿನ ಭಾರತೀಯ ಜನತಾ ಪಾರ್ಟಿಯ ಸರಕಾರ ಇದ್ದಾಗ ಬಿಲ್ ಸರಿಯಾಗಿ ಪಾವತಿಯಾಗದೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆ ವಿಷಯ ಮುಂದಿಟ್ಟು ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ರಾಜ್ಯವಾಪಿ ವ್ಯಾಪಕ ಪ್ರತಿಭಟನೆ ಮಾಡಿತ್ತು. ಅದರೊಂದಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೂಡ 40% ಕಮೀಷನ್ ವಿಷಯ ಇಟ್ಟುಕೊಂಡು ಆಗಿನ ವಿಪಕ್ಷ ಮುಖಂಡ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅದು ಕೂಡ ಕಾಂಗ್ರೆಸ್ಸಿಗೆ ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಒದಗಿಸಿತ್ತು.
ಈ ಎಲ್ಲಾ ವಿಷಯಗಳ ಲಾಭ ಕಾಂಗ್ರೆಸ್ಸಿಗೆ ದೊರಕಿತ್ತು.

ಈಗ ಅಧಿಕಾರಕ್ಕೆ ಬಂದು ಎರಡು ಮುಕ್ಕಾಲು ತಿಂಗಳು ಕಳೆದು ಹೋದರೂ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ನೀಡಿಲ್ಲ. ಹೀಗಿರುವಾಗ ಇನ್ನು ರಾಜ್ಯದ ಅದೆಷ್ಟೋ ಗುತ್ತಿಗೆದಾರರು ಕೂಡ ಹೀಗೆ ಎಷ್ಟೋ ತಿಂಗಳಿನಿಂದ ಬರಬೇಕಾದ ಬಾಕಿ ಬರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಈಗ ಚುನಾಯಿತ ಆಡಳಿತ ಇಲ್ಲದೇ ಇರುವುದರಿಂದ ಅಧಿಕಾರದ್ದೇ ದರ್ಬಾರ್ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದರಿಂದ ಏನಾದರೂ ಸಿಗಬಹುದು ಎನ್ನುವ ಆಶಾಭಾವನೆಯನ್ನು ಗುತ್ತಿಗೆದಾರರು ಹೊಂದಿದ್ದಾರೆ. ಈ ಗುತ್ತಿಗೆದಾರರು ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search