• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾವಾಗ ಸಿಗಲಿದೆ ಗುತ್ತಿಗೆದಾರರ ಬಾಕಿ?

Tulunadu News Posted On August 7, 2023
0


0
Shares
  • Share On Facebook
  • Tweet It

ಬಿಲ್ ಪಾವತಿಸಿ ಅಥವಾ ದಯಾಮರಣ ಕರುಣಿಸಿ ಎಂದು ಬಿಬಿಎಂಪಿ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ 2000 ಕೋಟಿ ರೂ ಲಭ್ಯವಿದ್ದರೂ ಸುಮಾರು 26 ತಿಂಗಳುಗಳಿಂದ ಗುತ್ತಿಗೆದಾರರು ಕಾರ್ಯ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲಾಗಿಲ್ಲ. ಈ ಕೂಡಲೇ ಹಣ ಪಾವತಿಸಿ, ಇಲ್ಲದಿದ್ದರೆ 500 ಮಂದಿ ಬಿಬಿಎಂಪಿ ಗುತ್ತಿಗೆದಾರರಿಗೆ ದಯಾಮರಣ ಕರುಣಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆಯುತ್ತೇವೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಹಿಂದಿನ ಭಾರತೀಯ ಜನತಾ ಪಾರ್ಟಿಯ ಸರಕಾರ ಇದ್ದಾಗ ಬಿಲ್ ಸರಿಯಾಗಿ ಪಾವತಿಯಾಗದೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆ ವಿಷಯ ಮುಂದಿಟ್ಟು ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ರಾಜ್ಯವಾಪಿ ವ್ಯಾಪಕ ಪ್ರತಿಭಟನೆ ಮಾಡಿತ್ತು. ಅದರೊಂದಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೂಡ 40% ಕಮೀಷನ್ ವಿಷಯ ಇಟ್ಟುಕೊಂಡು ಆಗಿನ ವಿಪಕ್ಷ ಮುಖಂಡ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅದು ಕೂಡ ಕಾಂಗ್ರೆಸ್ಸಿಗೆ ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಒದಗಿಸಿತ್ತು.
ಈ ಎಲ್ಲಾ ವಿಷಯಗಳ ಲಾಭ ಕಾಂಗ್ರೆಸ್ಸಿಗೆ ದೊರಕಿತ್ತು.

ಈಗ ಅಧಿಕಾರಕ್ಕೆ ಬಂದು ಎರಡು ಮುಕ್ಕಾಲು ತಿಂಗಳು ಕಳೆದು ಹೋದರೂ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ನೀಡಿಲ್ಲ. ಹೀಗಿರುವಾಗ ಇನ್ನು ರಾಜ್ಯದ ಅದೆಷ್ಟೋ ಗುತ್ತಿಗೆದಾರರು ಕೂಡ ಹೀಗೆ ಎಷ್ಟೋ ತಿಂಗಳಿನಿಂದ ಬರಬೇಕಾದ ಬಾಕಿ ಬರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಈಗ ಚುನಾಯಿತ ಆಡಳಿತ ಇಲ್ಲದೇ ಇರುವುದರಿಂದ ಅಧಿಕಾರದ್ದೇ ದರ್ಬಾರ್ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದರಿಂದ ಏನಾದರೂ ಸಿಗಬಹುದು ಎನ್ನುವ ಆಶಾಭಾವನೆಯನ್ನು ಗುತ್ತಿಗೆದಾರರು ಹೊಂದಿದ್ದಾರೆ. ಈ ಗುತ್ತಿಗೆದಾರರು ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search