• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾವಾಗ ಸಿಗಲಿದೆ ಗುತ್ತಿಗೆದಾರರ ಬಾಕಿ?

Tulunadu News Posted On August 7, 2023
0


0
Shares
  • Share On Facebook
  • Tweet It

ಬಿಲ್ ಪಾವತಿಸಿ ಅಥವಾ ದಯಾಮರಣ ಕರುಣಿಸಿ ಎಂದು ಬಿಬಿಎಂಪಿ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ 2000 ಕೋಟಿ ರೂ ಲಭ್ಯವಿದ್ದರೂ ಸುಮಾರು 26 ತಿಂಗಳುಗಳಿಂದ ಗುತ್ತಿಗೆದಾರರು ಕಾರ್ಯ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲಾಗಿಲ್ಲ. ಈ ಕೂಡಲೇ ಹಣ ಪಾವತಿಸಿ, ಇಲ್ಲದಿದ್ದರೆ 500 ಮಂದಿ ಬಿಬಿಎಂಪಿ ಗುತ್ತಿಗೆದಾರರಿಗೆ ದಯಾಮರಣ ಕರುಣಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆಯುತ್ತೇವೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಹಿಂದಿನ ಭಾರತೀಯ ಜನತಾ ಪಾರ್ಟಿಯ ಸರಕಾರ ಇದ್ದಾಗ ಬಿಲ್ ಸರಿಯಾಗಿ ಪಾವತಿಯಾಗದೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆ ವಿಷಯ ಮುಂದಿಟ್ಟು ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ರಾಜ್ಯವಾಪಿ ವ್ಯಾಪಕ ಪ್ರತಿಭಟನೆ ಮಾಡಿತ್ತು. ಅದರೊಂದಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೂಡ 40% ಕಮೀಷನ್ ವಿಷಯ ಇಟ್ಟುಕೊಂಡು ಆಗಿನ ವಿಪಕ್ಷ ಮುಖಂಡ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅದು ಕೂಡ ಕಾಂಗ್ರೆಸ್ಸಿಗೆ ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಒದಗಿಸಿತ್ತು.
ಈ ಎಲ್ಲಾ ವಿಷಯಗಳ ಲಾಭ ಕಾಂಗ್ರೆಸ್ಸಿಗೆ ದೊರಕಿತ್ತು.

ಈಗ ಅಧಿಕಾರಕ್ಕೆ ಬಂದು ಎರಡು ಮುಕ್ಕಾಲು ತಿಂಗಳು ಕಳೆದು ಹೋದರೂ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ನೀಡಿಲ್ಲ. ಹೀಗಿರುವಾಗ ಇನ್ನು ರಾಜ್ಯದ ಅದೆಷ್ಟೋ ಗುತ್ತಿಗೆದಾರರು ಕೂಡ ಹೀಗೆ ಎಷ್ಟೋ ತಿಂಗಳಿನಿಂದ ಬರಬೇಕಾದ ಬಾಕಿ ಬರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಈಗ ಚುನಾಯಿತ ಆಡಳಿತ ಇಲ್ಲದೇ ಇರುವುದರಿಂದ ಅಧಿಕಾರದ್ದೇ ದರ್ಬಾರ್ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದರಿಂದ ಏನಾದರೂ ಸಿಗಬಹುದು ಎನ್ನುವ ಆಶಾಭಾವನೆಯನ್ನು ಗುತ್ತಿಗೆದಾರರು ಹೊಂದಿದ್ದಾರೆ. ಈ ಗುತ್ತಿಗೆದಾರರು ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search