• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾವಾಗ ಸಿಗಲಿದೆ ಗುತ್ತಿಗೆದಾರರ ಬಾಕಿ?

Tulunadu News Posted On August 7, 2023
0


0
Shares
  • Share On Facebook
  • Tweet It

ಬಿಲ್ ಪಾವತಿಸಿ ಅಥವಾ ದಯಾಮರಣ ಕರುಣಿಸಿ ಎಂದು ಬಿಬಿಎಂಪಿ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ 2000 ಕೋಟಿ ರೂ ಲಭ್ಯವಿದ್ದರೂ ಸುಮಾರು 26 ತಿಂಗಳುಗಳಿಂದ ಗುತ್ತಿಗೆದಾರರು ಕಾರ್ಯ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲಾಗಿಲ್ಲ. ಈ ಕೂಡಲೇ ಹಣ ಪಾವತಿಸಿ, ಇಲ್ಲದಿದ್ದರೆ 500 ಮಂದಿ ಬಿಬಿಎಂಪಿ ಗುತ್ತಿಗೆದಾರರಿಗೆ ದಯಾಮರಣ ಕರುಣಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆಯುತ್ತೇವೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಹಿಂದಿನ ಭಾರತೀಯ ಜನತಾ ಪಾರ್ಟಿಯ ಸರಕಾರ ಇದ್ದಾಗ ಬಿಲ್ ಸರಿಯಾಗಿ ಪಾವತಿಯಾಗದೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆ ವಿಷಯ ಮುಂದಿಟ್ಟು ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ರಾಜ್ಯವಾಪಿ ವ್ಯಾಪಕ ಪ್ರತಿಭಟನೆ ಮಾಡಿತ್ತು. ಅದರೊಂದಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೂಡ 40% ಕಮೀಷನ್ ವಿಷಯ ಇಟ್ಟುಕೊಂಡು ಆಗಿನ ವಿಪಕ್ಷ ಮುಖಂಡ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅದು ಕೂಡ ಕಾಂಗ್ರೆಸ್ಸಿಗೆ ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಒದಗಿಸಿತ್ತು.
ಈ ಎಲ್ಲಾ ವಿಷಯಗಳ ಲಾಭ ಕಾಂಗ್ರೆಸ್ಸಿಗೆ ದೊರಕಿತ್ತು.

ಈಗ ಅಧಿಕಾರಕ್ಕೆ ಬಂದು ಎರಡು ಮುಕ್ಕಾಲು ತಿಂಗಳು ಕಳೆದು ಹೋದರೂ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ನೀಡಿಲ್ಲ. ಹೀಗಿರುವಾಗ ಇನ್ನು ರಾಜ್ಯದ ಅದೆಷ್ಟೋ ಗುತ್ತಿಗೆದಾರರು ಕೂಡ ಹೀಗೆ ಎಷ್ಟೋ ತಿಂಗಳಿನಿಂದ ಬರಬೇಕಾದ ಬಾಕಿ ಬರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಈಗ ಚುನಾಯಿತ ಆಡಳಿತ ಇಲ್ಲದೇ ಇರುವುದರಿಂದ ಅಧಿಕಾರದ್ದೇ ದರ್ಬಾರ್ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದರಿಂದ ಏನಾದರೂ ಸಿಗಬಹುದು ಎನ್ನುವ ಆಶಾಭಾವನೆಯನ್ನು ಗುತ್ತಿಗೆದಾರರು ಹೊಂದಿದ್ದಾರೆ. ಈ ಗುತ್ತಿಗೆದಾರರು ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search