• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅವಿಶ್ವಾಸ ನಿಲುವಳಿ ನಮಗೊಂದು ಅವಕಾಶ – ಮೋದಿ

Tulunadu News Posted On August 8, 2023
0


0
Shares
  • Share On Facebook
  • Tweet It

ಲೋಕಸಭೆಯಲ್ಲಿ ಆಡಳಿತರೂಢ ಎನ್ ಡಿಎ ಸರಕಾರದ ಅವಿಶ್ವಾಸ ನಿಲುವಳಿ ಮಂಡಿಸಿರುವ ಇ.ಂ.ಡಿ.ಯಾ. ಮೈತ್ರಿಕೂಟಕ್ಕೆ ಅದೊಂದು ಕೇವಲ ಕಾರ್ಯಕ್ರಮ ಮಾತ್ರ. ಆದರೆ ದೇಶದ ಬೆಳವಣಿಗೆ, ಸಮಗ್ರತೆ, ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಎನ್ ಡಿಎ ಮೈತ್ರಿಕೂಟಕ್ಕೆ ನಮ್ಮ ವಿಷಯವನ್ನು ಜನರ ಮುಂದೆ ಇಡಲು ಇದೊಂದು ಅವಕಾಶ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ವಿಪಕ್ಷಗಳ ಒಕ್ಕೂಟದಲ್ಲಿ ಅವರಿಗೆ ಪರಸ್ಪರರ ಬಗ್ಗೆ ನಂಬಿಕೆ, ವಿಶ್ವಾಸ ಇಲ್ಲ ಎನ್ನುವುದು ದೇಶಕ್ಕೆ ತಿಳಿದಿದೆ. ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನ ಮಾಡುವ ಮತ್ತು ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡುವ ನಮ್ಮ ಬದ್ಧತೆ ಯಾವಾಗಲೂ ಅಚಲವಾಗಿದೆ ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ. ಅವಿಶ್ವಾಸ ನಿಲುವಳಿಯ ಮೇಲೆ 16 ಗಂಟೆ ಚರ್ಚೆಗಳು ನಡೆಯಲಿದ್ದು, 15 ಸಂಸದರು ಮಾತನಾಡಲಿದ್ದಾರೆ. ವಿಪಕ್ಷಗಳ ಕಡೆಯಿಂದ ರಾಹುಲ್ ಗಾಂಧಿ ಮೊದಲ ಭಾಷಣ ಮಾಡಿದರೆ ಆಡಳಿತ ಪಕ್ಷದ ಕಡೆಯಿಂದ ಭಾರತೀಯ ಜನತಾ ಪಾರ್ಟಿ ಸಂಸದ ನಿಶಿಕಾಂತ್ ದುಬೆ ಪ್ರಥಮ ಭಾಷಣ ಮಾಡಲಿದ್ದಾರೆ.

ಈ ಅವಿಶ್ವಾಸ ಗೊತ್ತುವಳಿ ಬಗ್ಗೆ ಸಂಸದೀಯ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಪಕ್ಷದ ಸಂಸದರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ನಾವು ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲಿದ್ದೇವೆ ಎಂದು ನುಡಿದಿದ್ದಾರೆ.

ಇನ್ನು ಎನ್ ಸಿಟಿ ಬಿಲ್ ( ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ದೆಹಲಿ ಕಾಯ್ದೆ 1991) ತಿದ್ದುಪಡಿ ಬಗ್ಗೆ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿದ ಮೋದಿಯವರು ಈ ಮಸೂದೆ ಲೋಕಸಭಾ ಚುನಾವಣೆ ಎಂಬ ಫೈನಲ್ ಪಂದ್ಯದ ಮೊದಲಿನ ಸೆಮಿಫೈನಲ್ ಆಗಿದೆ. ಈಗಾಗಲೇ ನಾವು ರಾಜ್ಯಸಭೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದೇವೆ. ಫೈನಲ್ ಪಂದ್ಯದ ಮೊದಲು ಇದನ್ನು ಗೆದ್ದು ನಮ್ಮ ಹಾದಿಯಲ್ಲಿ ನಡೆಯೋಣ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search