• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅವಿಶ್ವಾಸ ನಿಲುವಳಿ ನಮಗೊಂದು ಅವಕಾಶ – ಮೋದಿ

Tulunadu News Posted On August 8, 2023
0


0
Shares
  • Share On Facebook
  • Tweet It

ಲೋಕಸಭೆಯಲ್ಲಿ ಆಡಳಿತರೂಢ ಎನ್ ಡಿಎ ಸರಕಾರದ ಅವಿಶ್ವಾಸ ನಿಲುವಳಿ ಮಂಡಿಸಿರುವ ಇ.ಂ.ಡಿ.ಯಾ. ಮೈತ್ರಿಕೂಟಕ್ಕೆ ಅದೊಂದು ಕೇವಲ ಕಾರ್ಯಕ್ರಮ ಮಾತ್ರ. ಆದರೆ ದೇಶದ ಬೆಳವಣಿಗೆ, ಸಮಗ್ರತೆ, ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಎನ್ ಡಿಎ ಮೈತ್ರಿಕೂಟಕ್ಕೆ ನಮ್ಮ ವಿಷಯವನ್ನು ಜನರ ಮುಂದೆ ಇಡಲು ಇದೊಂದು ಅವಕಾಶ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ವಿಪಕ್ಷಗಳ ಒಕ್ಕೂಟದಲ್ಲಿ ಅವರಿಗೆ ಪರಸ್ಪರರ ಬಗ್ಗೆ ನಂಬಿಕೆ, ವಿಶ್ವಾಸ ಇಲ್ಲ ಎನ್ನುವುದು ದೇಶಕ್ಕೆ ತಿಳಿದಿದೆ. ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನ ಮಾಡುವ ಮತ್ತು ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡುವ ನಮ್ಮ ಬದ್ಧತೆ ಯಾವಾಗಲೂ ಅಚಲವಾಗಿದೆ ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ. ಅವಿಶ್ವಾಸ ನಿಲುವಳಿಯ ಮೇಲೆ 16 ಗಂಟೆ ಚರ್ಚೆಗಳು ನಡೆಯಲಿದ್ದು, 15 ಸಂಸದರು ಮಾತನಾಡಲಿದ್ದಾರೆ. ವಿಪಕ್ಷಗಳ ಕಡೆಯಿಂದ ರಾಹುಲ್ ಗಾಂಧಿ ಮೊದಲ ಭಾಷಣ ಮಾಡಿದರೆ ಆಡಳಿತ ಪಕ್ಷದ ಕಡೆಯಿಂದ ಭಾರತೀಯ ಜನತಾ ಪಾರ್ಟಿ ಸಂಸದ ನಿಶಿಕಾಂತ್ ದುಬೆ ಪ್ರಥಮ ಭಾಷಣ ಮಾಡಲಿದ್ದಾರೆ.

ಈ ಅವಿಶ್ವಾಸ ಗೊತ್ತುವಳಿ ಬಗ್ಗೆ ಸಂಸದೀಯ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಪಕ್ಷದ ಸಂಸದರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ನಾವು ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲಿದ್ದೇವೆ ಎಂದು ನುಡಿದಿದ್ದಾರೆ.

ಇನ್ನು ಎನ್ ಸಿಟಿ ಬಿಲ್ ( ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ದೆಹಲಿ ಕಾಯ್ದೆ 1991) ತಿದ್ದುಪಡಿ ಬಗ್ಗೆ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿದ ಮೋದಿಯವರು ಈ ಮಸೂದೆ ಲೋಕಸಭಾ ಚುನಾವಣೆ ಎಂಬ ಫೈನಲ್ ಪಂದ್ಯದ ಮೊದಲಿನ ಸೆಮಿಫೈನಲ್ ಆಗಿದೆ. ಈಗಾಗಲೇ ನಾವು ರಾಜ್ಯಸಭೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದೇವೆ. ಫೈನಲ್ ಪಂದ್ಯದ ಮೊದಲು ಇದನ್ನು ಗೆದ್ದು ನಮ್ಮ ಹಾದಿಯಲ್ಲಿ ನಡೆಯೋಣ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search