• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಡಿಗೆ ಹಣ ಕೊಟ್ಟಿಲ್ಲ, ತರಕಾರಿಗೆ ಹಣ ನೀಡಿಲ್ಲ, ಮಾತೃವಂದನಾ ಹಣ ಬರುತ್ತಿಲ್ಲ!

Tulunadu News Posted On August 10, 2023
0


0
Shares
  • Share On Facebook
  • Tweet It

ಸರಕಾರದ ದುಡ್ಡು ಉಚಿತ ಗ್ಯಾರಂಟಿಗಳಿಗೆ ಬಳಕೆಯಾಗುತ್ತಿರುವುದರಿಂದ ಮತ್ತೊಂದು ಸಂಕಷ್ಟವನ್ನು ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಅನುಭವಿಸುವಂತಾಗಿದೆ. ರಾಜ್ಯದ ಅನೇಕ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಇಲ್ಲ. ಅವು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಅವುಗಳಿಗೆ ಕಳೆದ ಎಂಟು ತಿಂಗಳುಗಳಿಂದ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಕಟ್ಟಡ ಮಾಲೀಕರು ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಲು ಕಾರ್ಯಕರ್ತೆಯರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅದರಲ್ಲಿ ಹಲವು ಕಡೆಗಳಲ್ಲಿ ಕಾರ್ಯಕರ್ತೆಯರೇ ತಮ್ಮ ಸ್ವಂತ ದುಡ್ಡು ಕೊಟ್ಟು ಬಾಡಿಗೆ ಪಾವತಿಸುತ್ತಿದ್ದಾರೆ. ಈ ಮಾತನ್ನು ಬಹಳ ನೋವಿನಿಂದ ಹೇಳಿದವರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕೆ. ನಾಗರತ್ನ.

ಒಂದು ಕಡೆಯಿಂದ ತರಕಾರಿ ಬೆಲೆ ಏರುತ್ತಿರುವುದರಿಂದ ಸಾಮಾನ್ಯ ಕುಟುಂಬದಲ್ಲಿ ತರಕಾರಿಗಳನ್ನು ಖರೀದಿಸುವುದು ಹೇಗೆಂಬ ಚಿಂತೆ ಕಾಡುತ್ತಿದ್ದರೆ, ಮತ್ತೊಂದೆಡೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು, ಗರ್ಭಿನಿಯರ ಸಹಿತ ಸುಮಾರು 50 ರಿಂದ 60 ಮಂದಿ ಊಟಕ್ಕೆ ಇರುತ್ತಾರೆ. ಅವರಿಗೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆಯಂತಹ ರೇಷನ್ ಸಿಗುತ್ತಿದ್ದರೂ, ಕಳೆದ ಐದು ತಿಂಗಳುಗಳಿಂದ ತರಕಾರಿಗೆ ದುಡ್ಡು ಕೊಟ್ಟಿಲ್ಲ. ಇದರಿಂದ ಪದಾರ್ಥ ಹೇಗೆ ಮಾಡುವುದು. ಇದನ್ನು ಕೂಡ ಅಂಗನವಾಡಿ ಕಾರ್ಯಕರ್ತರೇ ಹೊಂದಿಸುವ ಪರಿಸ್ಥಿತಿ ಇದೆ ಎಂದು ನಾಗರತ್ನ ಹೇಳಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ಮೊದಲ ಹೆರಿಗೆ ಮಾಡಿಸಿಕೊಂಡ ಎಲ್ಲರಿಗೂ ಮಾತೃವಂದನ ಯೋಜನೆಯಡಿ 5 ಸಾವಿರ ದುಡ್ಡು ನೀಡಬೇಕಿದೆ. ಅದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಳ್ಳಲು ಸರಕಾರ ಹೇಳುತ್ತದೆ. ಆದರೆ ಯಾರಿಗೂ ಹಣ ಬಿಡುಗಡೆಯಾಗುತ್ತಿಲ್ಲ. ಅಂತವರು ಕಾರ್ಯಕರ್ತೆಯರ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೆಲ್ಲ ಮುಜುಗರ ಅನುಭವಿಸಿ ಅಂಗನವಾಡಿ ಕಾರ್ತಕರ್ತೆಯರು ಕೆಲಸ ಮಾಡಬೇಕಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search