• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಡಿಗೆ ಹಣ ಕೊಟ್ಟಿಲ್ಲ, ತರಕಾರಿಗೆ ಹಣ ನೀಡಿಲ್ಲ, ಮಾತೃವಂದನಾ ಹಣ ಬರುತ್ತಿಲ್ಲ!

Tulunadu News Posted On August 10, 2023
0


0
Shares
  • Share On Facebook
  • Tweet It

ಸರಕಾರದ ದುಡ್ಡು ಉಚಿತ ಗ್ಯಾರಂಟಿಗಳಿಗೆ ಬಳಕೆಯಾಗುತ್ತಿರುವುದರಿಂದ ಮತ್ತೊಂದು ಸಂಕಷ್ಟವನ್ನು ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಅನುಭವಿಸುವಂತಾಗಿದೆ. ರಾಜ್ಯದ ಅನೇಕ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಇಲ್ಲ. ಅವು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಅವುಗಳಿಗೆ ಕಳೆದ ಎಂಟು ತಿಂಗಳುಗಳಿಂದ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಕಟ್ಟಡ ಮಾಲೀಕರು ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಲು ಕಾರ್ಯಕರ್ತೆಯರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅದರಲ್ಲಿ ಹಲವು ಕಡೆಗಳಲ್ಲಿ ಕಾರ್ಯಕರ್ತೆಯರೇ ತಮ್ಮ ಸ್ವಂತ ದುಡ್ಡು ಕೊಟ್ಟು ಬಾಡಿಗೆ ಪಾವತಿಸುತ್ತಿದ್ದಾರೆ. ಈ ಮಾತನ್ನು ಬಹಳ ನೋವಿನಿಂದ ಹೇಳಿದವರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕೆ. ನಾಗರತ್ನ.

ಒಂದು ಕಡೆಯಿಂದ ತರಕಾರಿ ಬೆಲೆ ಏರುತ್ತಿರುವುದರಿಂದ ಸಾಮಾನ್ಯ ಕುಟುಂಬದಲ್ಲಿ ತರಕಾರಿಗಳನ್ನು ಖರೀದಿಸುವುದು ಹೇಗೆಂಬ ಚಿಂತೆ ಕಾಡುತ್ತಿದ್ದರೆ, ಮತ್ತೊಂದೆಡೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು, ಗರ್ಭಿನಿಯರ ಸಹಿತ ಸುಮಾರು 50 ರಿಂದ 60 ಮಂದಿ ಊಟಕ್ಕೆ ಇರುತ್ತಾರೆ. ಅವರಿಗೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆಯಂತಹ ರೇಷನ್ ಸಿಗುತ್ತಿದ್ದರೂ, ಕಳೆದ ಐದು ತಿಂಗಳುಗಳಿಂದ ತರಕಾರಿಗೆ ದುಡ್ಡು ಕೊಟ್ಟಿಲ್ಲ. ಇದರಿಂದ ಪದಾರ್ಥ ಹೇಗೆ ಮಾಡುವುದು. ಇದನ್ನು ಕೂಡ ಅಂಗನವಾಡಿ ಕಾರ್ಯಕರ್ತರೇ ಹೊಂದಿಸುವ ಪರಿಸ್ಥಿತಿ ಇದೆ ಎಂದು ನಾಗರತ್ನ ಹೇಳಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ಮೊದಲ ಹೆರಿಗೆ ಮಾಡಿಸಿಕೊಂಡ ಎಲ್ಲರಿಗೂ ಮಾತೃವಂದನ ಯೋಜನೆಯಡಿ 5 ಸಾವಿರ ದುಡ್ಡು ನೀಡಬೇಕಿದೆ. ಅದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಳ್ಳಲು ಸರಕಾರ ಹೇಳುತ್ತದೆ. ಆದರೆ ಯಾರಿಗೂ ಹಣ ಬಿಡುಗಡೆಯಾಗುತ್ತಿಲ್ಲ. ಅಂತವರು ಕಾರ್ಯಕರ್ತೆಯರ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೆಲ್ಲ ಮುಜುಗರ ಅನುಭವಿಸಿ ಅಂಗನವಾಡಿ ಕಾರ್ತಕರ್ತೆಯರು ಕೆಲಸ ಮಾಡಬೇಕಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search