• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ಮೋದಿಯಾಗಬೇಕಾದರೆ ಶಿವರಾತ್ರಿ ಡೆಡ್ ಲೈನ್?

Tulunadu News Posted On August 10, 2023
0


0
Shares
  • Share On Facebook
  • Tweet It

ಶಿವರಾತ್ರಿಗೂ, ಚುನಾವಣೆಗೂ ಏನು ಸಂಬಂಧ ಎಂದು ನಿಮಗೆ ಅನಿಸಬಹುದು. ಸಂಬಂಧ ಇದೆ. ಮುಂದಿನ ವರ್ಷ 2024 ರ ಮಾರ್ಚ್ 8 ರಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಇನ್ನು ಲೋಕಸಭಾ ಚುನಾವಣೆ ಬಹುತೇಕ ಮೇ ಮೊದಲ ವಾರ ನಡೆಯಲಿದೆ. ಮಾರ್ಚ್ 8 ರ ಒಳಗೆ ಲೋಕಸಭಾ ಚುನಾವಣೆ ನಡೆದರೆ ಮಾತ್ರ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಇಲ್ಲದಿದ್ದರೆ ಯಾರಾದರೂ ಮಹಿಳೆ ದೇಶದ ಗದ್ದುಗೆ ಹಿಡಿಯಲಿದ್ದಾರೆ. ಹೀಗೆಂದು ಖ್ಯಾತ ಜ್ಯೋತಿಷಿ, ಧರ್ಮದರ್ಶಿ ಡಾ. ಯಶವಂತ್ ಗುರೂಜಿ ಇಂತಹ ಸಾಧ್ಯತೆಯ ಬಗ್ಗೆ ಕಾಲಜ್ಞಾನ ನುಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದೇ ಇದೇ ಜ್ಯೋತಿಷಿ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ. ಆದ್ದರಿಂದ ಇವರು ಮತ್ತೆ ರಾಷ್ಟ್ರರಾಜಕಾರಣದಲ್ಲಿ ನುಡಿದಿರುವ ಭವಿಷ್ಯ ನಿಜವಾಗಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಒಂದು ವೇಳೆ ಎನ್ ಡಿಎ ಬಹುಮತ ಪಡೆದು ಅಧಿಕಾರಕ್ಕೆ ಬಂದು ಮಹಿಳೆ ಪ್ರಧಾನಿಯಾಗುವುದಾದಲ್ಲಿ ಅಂತಹ ಮುಖಗಳು ಯಾವುದು ಎಂದು ನೋಡಿದರೆ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಆಗಬಹುದು ಎನ್ನುವುದು ಲೆಕ್ಕಾಚಾರ. ಒಂದು ವೇಳೆ ವಿಪಕ್ಷಗಳ ಒಕ್ಕೂಟ ಇಂ.ಡಿ.ಯಾ ಅಧಿಕಾರಕ್ಕೆ ಬಂದರೆ ನಿಸ್ಸಂಶಯವಾಗಿ ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಜೀವನದ ಬಹುದೊಡ್ಡ ಗುರಿಯನ್ನು ಈಡೇರಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ನಾವು ಇನ್ನು ಒಂಭತ್ತು ತಿಂಗಳು ಕಾಯಬೇಕು!

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search