• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀನಗರದ ಲಾಲ್ ಚೌಕಿಯಲ್ಲಿ ಶಾಶ್ವತವಾಗಿ ಹಾರಾಡಲಿದೆ ಭಾರತದ ರಾಷ್ಟ್ರಧ್ವಜ!

Tulunadu News Posted On August 10, 2023
0


0
Shares
  • Share On Facebook
  • Tweet It

ಕಾಶ್ಮೀರದಲ್ಲಿರುವ ಲಾಲ್ ಚೌಕ್ ಎನ್ನುವ ಪ್ರದೇಶ ಅನಾದಿಕಾಲದಿಂದಲೂ ಅನೇಕ ಹೋರಾಟಗಳ ಕೇಂದ್ರಬಿಂದು. ಈ ಪ್ರದೇಶದಲ್ಲಿ 1980 ರಲ್ಲಿ ಸೂಫಿ ಶೈಲಿಯಲ್ಲಿ ಗಡಿಯಾರ ಗೋಪುರದ ನಿರ್ಮಾಣವಾಗಿತ್ತು. 1990 ರಲ್ಲಿ ಮೂಲಭೂತವಾದಿಗಳು ಅಲ್ಲಿನ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಭೀಕರ ನರಮೇಧ ನಡೆಸಿ ಕಾಶ್ಮೀರದಿಂದ ಹೊರದಬ್ಬಿದರಲ್ಲ, ಆವತ್ತಿನಿಂದ ಲಾಲ್ ಚೌಕ ಅನೇಕ ಮಾರಣ ಹೋಮಗಳಿಗೆ ಸಾಕ್ಷಿಯಾಗಿದೆ. ಕಾಶ್ಮೀರವನ್ನು ಪ್ರತ್ಯೇಕಿಸುವ ಮನಸ್ಥಿತಿಯ ಮತಾಂಧ ಶಕ್ತಿಗಳು ಈ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜ ಯಾವತ್ತೂ ಹಾರಾಡಬಾರದು ಎಂದು ಶಪಥ ಮಾಡಿದ್ದರು. ಯಾರಿಗಾದರೂ ಗುಂಡಿಗೆ ಎದೆ ಕೊಡುವ ಧೈರ್ಯ ಇದ್ದರೆ ಲಾಲ್ ಚೌಕದಲ್ಲಿ ಭಾರತದ ರಾಷ್ಟ್ರಧ್ವಜ ಹಾರಿಸಿ ಎಂದು ಬಹಿರಂಗವಾಗಿ ಕರೆ ನೀಡಲಾಗಿತ್ತು.
ಅದನ್ನು ಸವಾಲಾಗಿ ಸ್ವೀಕರಿಸಿ 1992 ರ ಗಣರಾಜ್ಯೋತ್ಸವದಂದು ಭಾರತೀಯ ಜನತಾ ಪಾರ್ಟಿಯ ಅಂದಿನ ರಾಷ್ಟ್ರಾಧ್ಯಕ್ಷರಾಗಿದ್ದ ಮುರಳಿ ಮನೋಹರ್ ಜೋಷಿ, ಅಂದಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನರೇಂದ್ರ ಮೋದಿಯವರು ಭದ್ರತಾ ವ್ಯವಸ್ಥೆಯಲ್ಲಿ ಇದೇ ಲಾಲ್ ಚೌಕದಲ್ಲಿರುವ ಗಡಿಯಾರ ಗೋಪುರದಲ್ಲಿ ಭಾರತದ ರಾಷ್ಟ್ರಧ್ವವನ್ನು ಹಾರಿಸಿದ್ದರು. ಅಷ್ಟೇ ಅಲ್ಲ, ಆವತ್ತೇ ಈ ಗಡಿಯಾರ ಗೋಪುರದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಶಾಶ್ವತವಾಗಿ ಹಾರಿಸುವ ಸಂಕಲ್ಪವನ್ನು ಮೋದಿ ಮಾಡಿದ್ದರು. ಅದಾಗಿ 30 ವರ್ಷಗಳಾಗಿವೆ. ಮೋದಿಯವರ ದೂರದೃಷ್ಟಿಯ ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ಲಾಲ್ ಚೌಕ ಹೊಸ ರೂಪ ಪಡೆದುಕೊಂಡಿದೆ. ಈ ಗಡಿಯಾರ ಗೋಪುರಕ್ಕೆ ಹೊಸ ಕಾಯಕಲ್ಪ ನೀಡಲಾಗಿದೆ. ಹಳೆ ವಿನ್ಯಾಸವನ್ನು ಉಳಿಸಿಕೊಂಡು ಹೊಸ ಭಾರತದ ಕನಸನ್ನು ಎದೆಯಲ್ಲಿಟ್ಟು ಗಡಿಯಾರ ಗೋಪುರ ನವವಧುವಿನಂತೆ ಸಜ್ಜಾಗಿದೆ. ಈ ಗಡಿಯಾರ ಗೋಪುರದ ಮೇಲೆ ಇನ್ನು ಮುಂದೆ ಶಾಶ್ವತವಾಗಿ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ. ನವಭಾರತದಲ್ಲಿ ಭಾರತಾಂಬೆಯ ಮುಕುಟದ ಮಣಿಯಾಗಿರುವ ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ಮೋದಿಯವರ ಈ ಕಾರ್ಯದಿಂದ ಪ್ರಪಂಚಕ್ಕೆ ಸಂದೇಶ ಹೋಗಿದೆ. ಕಾಶ್ಮೀರವನ್ನು ಪ್ರತ್ಯೇಕಿಸುವುದು ಬಿಡಿ, ಆ ಬಗ್ಗೆ ಕನಸು ಬಿದ್ದರೂ ನಿಮ್ಮ ನಾಶ ಖಂಡಿತ ಎನ್ನುವ ಮೇಸೆಜ್ ಪಾಕಿಸ್ತಾನದಲ್ಲಿ ರಿಂಗಣಿಸುತ್ತಿದೆ. ಅದು ಮೋದಿಯವರ ತಾಕತ್ತು. ಅದಕ್ಕೆ ಈ ದೃಶ್ಯವೇ ಸಾಕ್ಷಿ

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search