• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀನಗರದ ಲಾಲ್ ಚೌಕಿಯಲ್ಲಿ ಶಾಶ್ವತವಾಗಿ ಹಾರಾಡಲಿದೆ ಭಾರತದ ರಾಷ್ಟ್ರಧ್ವಜ!

Tulunadu News Posted On August 10, 2023
0


0
Shares
  • Share On Facebook
  • Tweet It

ಕಾಶ್ಮೀರದಲ್ಲಿರುವ ಲಾಲ್ ಚೌಕ್ ಎನ್ನುವ ಪ್ರದೇಶ ಅನಾದಿಕಾಲದಿಂದಲೂ ಅನೇಕ ಹೋರಾಟಗಳ ಕೇಂದ್ರಬಿಂದು. ಈ ಪ್ರದೇಶದಲ್ಲಿ 1980 ರಲ್ಲಿ ಸೂಫಿ ಶೈಲಿಯಲ್ಲಿ ಗಡಿಯಾರ ಗೋಪುರದ ನಿರ್ಮಾಣವಾಗಿತ್ತು. 1990 ರಲ್ಲಿ ಮೂಲಭೂತವಾದಿಗಳು ಅಲ್ಲಿನ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಭೀಕರ ನರಮೇಧ ನಡೆಸಿ ಕಾಶ್ಮೀರದಿಂದ ಹೊರದಬ್ಬಿದರಲ್ಲ, ಆವತ್ತಿನಿಂದ ಲಾಲ್ ಚೌಕ ಅನೇಕ ಮಾರಣ ಹೋಮಗಳಿಗೆ ಸಾಕ್ಷಿಯಾಗಿದೆ. ಕಾಶ್ಮೀರವನ್ನು ಪ್ರತ್ಯೇಕಿಸುವ ಮನಸ್ಥಿತಿಯ ಮತಾಂಧ ಶಕ್ತಿಗಳು ಈ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜ ಯಾವತ್ತೂ ಹಾರಾಡಬಾರದು ಎಂದು ಶಪಥ ಮಾಡಿದ್ದರು. ಯಾರಿಗಾದರೂ ಗುಂಡಿಗೆ ಎದೆ ಕೊಡುವ ಧೈರ್ಯ ಇದ್ದರೆ ಲಾಲ್ ಚೌಕದಲ್ಲಿ ಭಾರತದ ರಾಷ್ಟ್ರಧ್ವಜ ಹಾರಿಸಿ ಎಂದು ಬಹಿರಂಗವಾಗಿ ಕರೆ ನೀಡಲಾಗಿತ್ತು.
ಅದನ್ನು ಸವಾಲಾಗಿ ಸ್ವೀಕರಿಸಿ 1992 ರ ಗಣರಾಜ್ಯೋತ್ಸವದಂದು ಭಾರತೀಯ ಜನತಾ ಪಾರ್ಟಿಯ ಅಂದಿನ ರಾಷ್ಟ್ರಾಧ್ಯಕ್ಷರಾಗಿದ್ದ ಮುರಳಿ ಮನೋಹರ್ ಜೋಷಿ, ಅಂದಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನರೇಂದ್ರ ಮೋದಿಯವರು ಭದ್ರತಾ ವ್ಯವಸ್ಥೆಯಲ್ಲಿ ಇದೇ ಲಾಲ್ ಚೌಕದಲ್ಲಿರುವ ಗಡಿಯಾರ ಗೋಪುರದಲ್ಲಿ ಭಾರತದ ರಾಷ್ಟ್ರಧ್ವವನ್ನು ಹಾರಿಸಿದ್ದರು. ಅಷ್ಟೇ ಅಲ್ಲ, ಆವತ್ತೇ ಈ ಗಡಿಯಾರ ಗೋಪುರದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಶಾಶ್ವತವಾಗಿ ಹಾರಿಸುವ ಸಂಕಲ್ಪವನ್ನು ಮೋದಿ ಮಾಡಿದ್ದರು. ಅದಾಗಿ 30 ವರ್ಷಗಳಾಗಿವೆ. ಮೋದಿಯವರ ದೂರದೃಷ್ಟಿಯ ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ಲಾಲ್ ಚೌಕ ಹೊಸ ರೂಪ ಪಡೆದುಕೊಂಡಿದೆ. ಈ ಗಡಿಯಾರ ಗೋಪುರಕ್ಕೆ ಹೊಸ ಕಾಯಕಲ್ಪ ನೀಡಲಾಗಿದೆ. ಹಳೆ ವಿನ್ಯಾಸವನ್ನು ಉಳಿಸಿಕೊಂಡು ಹೊಸ ಭಾರತದ ಕನಸನ್ನು ಎದೆಯಲ್ಲಿಟ್ಟು ಗಡಿಯಾರ ಗೋಪುರ ನವವಧುವಿನಂತೆ ಸಜ್ಜಾಗಿದೆ. ಈ ಗಡಿಯಾರ ಗೋಪುರದ ಮೇಲೆ ಇನ್ನು ಮುಂದೆ ಶಾಶ್ವತವಾಗಿ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ. ನವಭಾರತದಲ್ಲಿ ಭಾರತಾಂಬೆಯ ಮುಕುಟದ ಮಣಿಯಾಗಿರುವ ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ಮೋದಿಯವರ ಈ ಕಾರ್ಯದಿಂದ ಪ್ರಪಂಚಕ್ಕೆ ಸಂದೇಶ ಹೋಗಿದೆ. ಕಾಶ್ಮೀರವನ್ನು ಪ್ರತ್ಯೇಕಿಸುವುದು ಬಿಡಿ, ಆ ಬಗ್ಗೆ ಕನಸು ಬಿದ್ದರೂ ನಿಮ್ಮ ನಾಶ ಖಂಡಿತ ಎನ್ನುವ ಮೇಸೆಜ್ ಪಾಕಿಸ್ತಾನದಲ್ಲಿ ರಿಂಗಣಿಸುತ್ತಿದೆ. ಅದು ಮೋದಿಯವರ ತಾಕತ್ತು. ಅದಕ್ಕೆ ಈ ದೃಶ್ಯವೇ ಸಾಕ್ಷಿ

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search