• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಇಚ್ಚೆಯ ದೀರ್ಘಕಾಲದ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ

Tulunadu News Posted On August 10, 2023
0


0
Shares
  • Share On Facebook
  • Tweet It

ಆರು ವರ್ಷಗಳ ಕಾಲ ಪರಸ್ಪರ ಸ್ವಇಚ್ಚೆಯಿಂದ ದೈಹಿಕ ಸಂಬಂಧದಲ್ಲಿದ್ದ ಯುವತಿ ನಂತರ ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಡಿದ್ದ ಎರಡು ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಸಾಮಾಜಿಕ ಜಾಲತಾಣದ ಮೂಲಕ ಓರ್ವ ಯುವತಿಗೆ ಒಬ್ಬ ಯುವಕ ಪರಿಚಯವಾಗಿದ್ದ. ಆ ಯುವಕ ಅಡುಗೆ ಮಾಡುವುದರಲ್ಲಿ ಎತ್ತಿದ ಕೈ. ತನ್ನ ಮನೆಯಲ್ಲಿ ತಾನೇ ರುಚಿಯಾದ ಅಡುಗೆಯನ್ನು ತಯಾರಿಸುತ್ತಿದ್ದ. ಆ ಬಳಿಕ ಯುವತಿ ಅಲ್ಲಿಯೇ ಹತ್ತಿರದ ಮನೆಯೊಂದರಲ್ಲಿ ವಾಸಿಸುತ್ತಿದ್ದ ಕಾರಣ ಅವನು ಊಟಕ್ಕೆ ಆಹ್ವಾನ ನೀಡುತ್ತಿದ್ದ. ಅವನ ಕೈ ರುಚಿಗೆ ಮಾರು ಹೋಗಿದ್ದ ಆಕೆ ಆತನ ಮನೆಗೆ ಹೋಗಿ ಬರುತ್ತಿದ್ದಳು. ಅಲ್ಲಿ ಅವರು ಊಟದ ಮೊದಲು ಬಿಯರ್ ಕುಡಿದು ನಂತರ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದರು. ಇದು ಸುಮಾರು ಆರು ವರ್ಷಗಳ ಕಾಲ ನಡೆದಿದೆ.
ಈಗ ಆ ಯುವತಿ ಅವನು ತನ್ನನ್ನು ಮದುವೆಯಾಗಲು ಒಪ್ಪುತ್ತಿಲ್ಲ ಎಂದು ಹೈಕೋರ್ಟಿನಲ್ಲಿ ಮೊಕದ್ದಮೆ ಹೂಡಿದ್ದಾಳೆ. ಇಬ್ಬರೂ ಮೊದಲ ದಿನದಿಂದಲೇ ಒಮ್ಮತದ ಮೇರೆಗೆ ನಡೆಸಿದ ಕೃತ್ಯವೂ ಇದಾಗಿದ್ದು, ಅಂತಹ ಲೈಂಗಿಕ ಸಮಪರ್ಕವು ಅತ್ಯಾಚಾರಕ್ಕೆ ಅರ್ಹವಾಗುವುದಿಲ್ಲ. ಯಾಕೆಂದರೆ ಇದು ಆರು ವರ್ಷಗಳ ಸುದೀರ್ಘ ಸಂಬಂಧವಾಗಿದೆ. ಒಂದು ವೇಳೆ ನಾವು ಈ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಅನುಮತಿ ನೀಡಿದರೆ ಅದು ಸುಪ್ರೀಂ ಕೋರ್ಟಿನ ಹಲವಾರು ತೀರ್ಪುಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ವಿವರಣೆ ನೀಡಿ ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ. ಯಾವುದೋ ಮಾಯೆಯಲ್ಲಿ ಬೀಳುವ ಹೆಣ್ಣುಮಕ್ಕಳು ನಂತರ ಅನ್ಯಾಯವಾಯಿತು ಎಂದು ಕೋರ್ಟ್ ಮೆಟ್ಟಲೇರಿದರೆ ಏನಾಗುತ್ತದೆ ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search