• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋನಿಯಾ, ರಾಹುಲ್ ಮಾಡಿದ ಕೆಲಸ ಒಬ್ಬ ಸೈನಿಕ ಮಾಡಿದ್ರೆ ದೇಶದ್ರೋಹ ಆಗುತ್ತಿತ್ತು ಎಂದ್ರು ರಾಥೋಡ್!

Tulunadu News Posted On August 11, 2023
0


0
Shares
  • Share On Facebook
  • Tweet It

ಕರ್ನಲ್ ರಾಜವರ್ಧನ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್ ನಲ್ಲಿ 2008 ರ ಘಟನೆಯೊಂದರ ಕುರಿತು ತಾವು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ವಿಷಯದ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ರಾಜಸ್ಥಾನದ ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಥೋಡ್ ಅವರು ಒಲಿಂಪಿಕ್ ಪದಕ ವಿಜೇತರೂ ಆಗಿದ್ದಾರೆ. ಶೂಟಿಂಗ್ ಕ್ರೀಡೆಯಲ್ಲಿ ಭಾರತವನ್ನು ವಿವಿಧ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು “2008 ರಲ್ಲಿ ಚೀನಾದ ಬಿಜಿಂಗ್ ನಲ್ಲಿ ಒಲಿಪಿಂಕ್ ಕ್ರೀಡಾಕೂಡ ನಡೆದಿತ್ತು. ಅದರಲ್ಲಿ ತಾವು ಭಾರತವನ್ನು ಪ್ರತಿನಿಧಿಸುತ್ತಿದ್ದೆ. ಆ ಅವಧಿಯಲ್ಲಿ ಭಾರತದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿತ್ತು. ಬಿಜಿಂಗ್ ನಲ್ಲಿ ಸೋನಿಯಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರು ಆಗಮಿಸಿ ಒಲಿಪಿಂಕ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳನ್ನು ಭೇಟಿ ಆಗುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಯಿತು.

ಸೋನಿಯಾ, ರಾಹುಲ್ ಭಾರತದಲ್ಲಿ ಆಗ ರಿಮೋಟ್ ಕಂಟ್ರೋಲ್ ನಿಂದ ಸರಕಾರವನ್ನು ಚಲಾಯಿಸುತ್ತಿದ್ದರು. ಆದರೆ ಸೋನಿಯಾ ಹಾಗೂ ರಾಹುಲ್ ಚೀನಾಗೆ ಆಗ ಆಗಮಿಸಿದರಾದರೂ ನಮ್ಮನ್ನು ಯಾರನ್ನೂ ಭೇಟಿಯಾಗಲು ಬಂದಿಲ್ಲ. ಯಾಕೆಂದರೆ ಚೀನಾದ ಕಮ್ಯೂನಿಸ್ಟ್ ಆಡಳಿತ ಇವರಿಗೆ ಅತಿಥಿ ಸತ್ಕಾರದ ಸಂಪೂರ್ಣ ವ್ಯವಸ್ಥೆ ಮಾಡಿತ್ತು. ನಮ್ಮ ದೇಶದ ಒಬ್ಬ ಸೈನಿಕ ಹಾಗೆ ಮಾಡಿದಿದ್ದರೆ ಆತನ ಮೇಲೆ ದೇಶದ್ರೋಹದ ಆಪಾದನೆ ಬರುತ್ತಿತ್ತು. ಅದೇ ಆರೋಪ ಈಗ ಇವರ ಮೇಲೆ ಹಾಕಬೇಕಾಗುತ್ತದೆ. ಈ ಬಗ್ಗೆ ತನಿಖೆ ಆಗಬೇಕು. ಯಾಕೆಂದರೆ ಶತ್ರು ದೇಶದೊಂದಿಗೆ ಮಾತುಕತೆ ಮಾಡುವುದು ಎಂದರೆ ದೇಶದ್ರೋಹಕ್ಕೆ ಸಮ ಎಂದು ರಾಥೋಡ್ ಹೇಳಿದ್ದಾರೆ.
ಸಾಮಾನ್ಯವಾಗಿ ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಳುಗಳನ್ನು ಹುರಿದುಂಬಿಸಲು ಆಯಾ ದೇಶದ ಉನ್ನತ ಸ್ಥಾನದಲ್ಲಿರುವ ಪ್ರತಿನಿಧಿಗಳು ತೆರಳುವುದು ಸಾಮಾನ್ಯ. ಆದರೆ ಚೀನಾದ ಬೀಜಿಂಗ್ ಗೆ ಬಂದರೂ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಳುಗಳನ್ನು ಪ್ರೋತ್ಸಾಹಿಸಲು ಯುಪಿಎ ಚೇರ್ ಪರ್ಸನ್ ಆಗಿದ್ದ ಸೋನಿಯಾ ಗಾಂಧಿ ಬಂದಿರದೇ ಇದದ್ದು ಸರಿಯಲ್ಲ ಎಂದು ರಾಥೋಡ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search