• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

SI ಎಂದು ನಂಬಿಸಿ ಲಾಡ್ಜ್‌ಗೆ ಕರೆದೊಯ್ದು ರೇಪ್!

Tulunadu News Posted On August 11, 2023
0


0
Shares
  • Share On Facebook
  • Tweet It

ಸಬ್‌ ಇನ್ಸ್‌ಪೆಕ್ಟರ್‌ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ.ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಗರದ ಇಂಜಿನಿಯರಿಂಗ್ ಕಾಲೇಜಿನ 19ರ ಹರೆಯದ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ಮೂಲಕ ಗೆಳೆತನ ಮಾಡಿ ಕೊಂಡ ಆರೋಪಿ ಯಮನೂರ ತನ್ನನ್ನು ವಾಮಂಜೂರು ಠಾಣೆಯ ಎಸ್ಸೈ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿನಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಹೇಳಿದ್ದಲ್ಲದೆ ಲಾಡ್ಜ್‌ಗೆ ಕರೆದೊಯ್ದು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಆಕೆಯೊಂದಿಗಿರುವ ಫೊಟೋಗಳನ್ನು ಇತರರಿಗೆ ಹಂಚಿ ಆ ಫೊಟೋಗಳನ್ನು ಅಳಿಸಿ ಹಾಕಬೇಕಿದ್ದರೆ ಹಣದ ಬೇಡಿಕೆಯನ್ನು ಮುಂದಿಟ್ಟ ಈ ಖದೀಮ. ಈದೀಗ ಈ ಕಿರಾತಕ ಬೀದಿ ನಾಟಕ ಕಲಾವಿದನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. 2023ರ ಮೇ ತಿಂಗಳಲ್ಲಿ ನಗರದ ಕದ್ರಿ ದೇವಸ್ಥಾನದಲ್ಲಿ ಭೇಟಿ ಮಾಡಿ ಬಳಿಕ ತಣ್ಣೀರುಬಾವಿಯ ಬೀಚ್‌ಗೆ ಕರೆದೊಯ್ದು ಫೋಟೊ ತೆಗೆದುಕೊಂಡು ಬಳಿಕ ಅದನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ ಬೆಂಗಳೂರು ಮತ್ತು ಕಿನ್ನಿಗೋಳಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ ಆ ಫೋಟೊಗಳನ್ನು ಆಕೆಯ ಮನೆಯವರಿಗೆ ಮತ್ತು ಸ್ನೇಹಿತರ ಮೊಬೈಲ್‌ಗೆ ಕಳುಹಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ. ಈ ಫೋಟೊಗಳನ್ನು ಅಳಿಸಿ ಹಾಕಬೇಕಿದ್ದರೆ 1.50 ಲಕ್ಷ ರೂ. ನೀಡಬೇಕು ಎಂದು ಬೇಡಿಕೆಯನ್ನಿಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯು ಮಂಗಳೂರು ಪೊಲೀಸರಿಗೆ ದೂರು ನೀಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಯಮನೂರ ಬೀದಿ ನಾಟಕ ಕಲಾವಿದನಾಗಿದ್ದರಿಂದ ಆತನು ಪೊಲೀಸ್ ಸಮವಸ್ತ್ರ ಹೊಂದಿದ್ದ. ಕೃತ್ಯಕ್ಕೆ ಇದೇ ಸಮವಸ್ತ್ರವನ್ನು ಬಳಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯ ವಿದ್ಯಾರ್ಥಿನಿಯರ, ಹೆಣ್ಮಕ್ಕಳ ಪರಿಚಯ ಮಾಡಿಕೊಂಡು ಪ್ರೀತಿಯ ನಾಟಕವಾಡಿ, ಅತ್ಯಾಚಾರ, ಮೋಸ ಮಾಡುವ ಪ್ರಕರಣಗಳು ಇದೀಗ ಹೆಚ್ಚಾಗುತ್ತಿವೆ. ಹಾಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಮೋಸದ ಜಾಲಕ್ಕೆ ಬಲಿ ಬೀಳದಂತೆ ಮಂಗಳೂರು ನಗರ ಪೊಲೀಸ್ ಅಯುಕ್ತ ಕುಲದೀಪ್ ಕುಮಾರ್ ಜೈನ್ ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search